Advertisement

“ಮಹಾ”ವಿಧಾನಸಭೆಯಲ್ಲಿ ಕೋಲಾಹಲ, ಅನುಚಿತ ವರ್ತನೆ: 12 ಬಿಜೆಪಿ ಶಾಸಕರು ಒಂದು ವರ್ಷ ಅನರ್ಹ

04:21 PM Jul 05, 2021 | Team Udayavani |

ಮುಂಬಯಿ: ಪ್ರಬಲ ರಾಜಕೀಯ ಪ್ರಭಾವ ಬೀರುವ ಪ್ರಮುಖ ಬೆಳವಣಿಗೆಯೊಂದರಲ್ಲಿ ವಿಧಾನಸಭೆಯಲ್ಲಿ ತೀವ್ರ ಕೋಲಾಹಲವೆಬ್ಬಿಸಿ, ಅನುಚಿತವಾಗಿ ವರ್ತಿಸಿದ 12 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭಾ ಸ್ಪೀಕರ್ ಒಂದು ವರ್ಷದವರೆಗೆ ಅಮಾನತುಗೊಳಿಸಿರುವ ಘಟನೆ ಸೋಮವಾರ (ಜುಲೈ 05) ನಡೆದಿದೆ.

Advertisement

ಇದನ್ನೂ ಓದಿ:‘ಮನಾಲಿ’ಯಲ್ಲಿ ತುಂಬಿ ತುಳುಕಿದ ಪ್ರವಾಸಿಗರು :ಇದು 3 ನೇ ಅಲೆಗೆ ಆಹ್ವಾನ ಎಂದ ನೆಟ್ಟಿಗರು  

ವರದಿಗಳ ಪ್ರಕಾರ, ರಾಜ್ಯ ವಿಧಾನಸಭೆಯಲ್ಲಿ ಮಳೆಗಾಲದ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಸ್ಪೀಕರ್ ಭಾಸ್ಕರ್ ಜಾಧವ್ ಅವರನ್ನು ನಿಂದಿಸಿದ ಆರೋಪದ ಮೇಲೆ 12 ಮಂದಿ ಬಿಜೆಪಿ ಶಾಸಕರನ್ನು ಅನರ್ಹಗೊಳಿಸಲಾಗಿದೆ ಎಂದು ವರದಿ ವಿವರಿಸಿದೆ.

ಸ್ಪೀಕರ್ ಭಾಸ್ಕರ್ ಜಾಧವ್ ಅವರ ಜತೆ ಅನುಚಿತವಾಗಿ ವರ್ತಿಸಿದ 12 ಮಂದಿ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವುದಾಗಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಬಿಜೆಪಿ ಶಾಸಕರನ್ನು ಅಮಾನತುಗೊಳಿಸುವ ನಿರ್ಣಯವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಬ್ ಅವರು ಮಂಡಿಸಿದ್ದು, ಅದನ್ನು ಧ್ವನಿ ಮತದಿಂದ ಅಂಗೀಕರಿಸಲಾಗಿತ್ತು ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next