Advertisement

ಥಾಣೆಯಲ್ಲಿ ವಿಕಾಸ್ ದುಬೆಯ ಇಬ್ಬರು ಆಪ್ತ ಸಹಚರರು ದಯಾ ನಾಯಕ್ ತಂಡದ ಬಲೆಗೆ

06:58 PM Jul 11, 2020 | Nagendra Trasi |

ಮಹಾರಾಷ್ಟ್ರ:ಪೊಲೀಸ್ ಎನ್ ಕೌಂಟರ್ ನಲ್ಲಿ ಹತ್ಯೆಗೀಡಾಗಿರುವ ಕಾನ್ಪುರದ ನಟೋರಿಯಸ್ ಗ್ಯಾಂಗ್ ಸ್ಟರ್ ವಿಕಾಸ್ ದುಬೆಯ ಇಬ್ಬರು ಆಪ್ತ ಸಹಚರರನ್ನು ಮಹಾರಾಷ್ಟ್ರ ಎಟಿಎಸ್ ಶನಿವಾರ ಥಾಣೆಯಲ್ಲಿ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಅರವಿಂದ್ ಅಲಿಯಾಸ್ ಗುಡ್ಡಾನ್ ತ್ರಿವೇದಿ ಹಾಗೂ ಆತನ ಚಾಲಕ ಸುಶೀಲ್ ಕುಮಾರ್ ಅಲಿಯಾಸ್ ಸೋನು ತಿವಾರಿಯನ್ನು ಮಹಾರಾಷ್ಟ್ರ ಜುಹೂ ಎಟಿಎಸ್ ತಂಡ ಬಂಧಿಸಿದೆ. ಉತ್ತರಪ್ರದೇಶದ ಕಾನ್ಪುರದಲ್ಲಿ ಎಂಟು ಮಂದಿ ಪೊಲೀಸರನ್ನು ಹತ್ಯೆಗೈದ ಪ್ರಕರಣದಲ್ಲಿ ಶಾಮೀಲಾಗಿದ್ದ ಇಬ್ಬರ ಮೇಲೆ ಐಪಿಸಿ ಸೆಕ್ಷನ್ 302, 307 ಹಾಗೂ 120(ಬಿ) ದಾಖಲಾಗಿದೆ.

ದುಬೆ ಸಹಚರರು ಮುಂಬೈನಲ್ಲಿ ತಲೆಮರೆಯಿಸಿಕೊಂಡಿರುವ ಬಗ್ಗೆ ಎಟಿಎಸ್ ತಂಡಕ್ಕೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ದಯಾ ನಾಯಕ್ ನೇತೃತ್ವದ ಎಟಿಎಸ್ ತಂಡ ಥಾಣೆಯಲ್ಲಿ ಗುಡ್ಡಾನ್ ಮತ್ತು ಸೋನುವನ್ನು ಸೆರೆಹಿಡಿದಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next