Advertisement

ದೆಹಲಿಯಲ್ಲಿ ಶಿಂಧೆ-ಫಡ್ನವಿಸ್ ;ಶಾ ಜತೆ ಸಂಪುಟ ವಿಸ್ತರಣೆ ಕಸರತ್ತು

07:49 PM Jul 09, 2022 | Team Udayavani |

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮುಂದಿನ ವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸುವುದಾಗಿ ಹೇಳಿದ್ದಾರೆ. ಇದೆ ವೇಳೆ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

Advertisement

ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ರಾಷ್ಟ್ರ ರಾಜಧಾನಿಯ ಪ್ರವಾಸದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿಂಧೆ, ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆಗಾಗಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಕರೆಯನ್ನು ತಳ್ಳಿಹಾಕಿದರು ಮತ್ತು 164 ಶಾಸಕರ ಬೆಂಬಲದೊಂದಿಗೆ ತಮ್ಮ ಸರ್ಕಾರವು ಪ್ರಬಲವಾಗಿದೆ ಮತ್ತು ಸ್ಥಿರವಾಗಿದೆ.ವಿರೋಧ ಪಕ್ಷವು ಕೇವಲ 99 ಶಾಸಕರನ್ನು ಹೊಂದಿದೆ ಎಂದು ಪ್ರತಿಪಾದಿಸಿದರು,.

ಶುಕ್ರವಾರ ಸಂಜೆ ದೆಹಲಿಗೆ ಆಗಮಿಸಿದ ನಂತರ ಶಿಂಧೆ ಮತ್ತು ಫಡ್ನವೀಸ್ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದರು.

ಶುಕ್ರವಾರ ರಾತ್ರಿ, ಇಬ್ಬರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸುದೀರ್ಘ ಸಭೆ ನಡೆಸಿದರು, ಈ ಸಮಯದಲ್ಲಿ ಮಹಾರಾಷ್ಟ್ರದ ಹೊಸ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವ್ಯವಸ್ಥೆಯ ವಿಶಾಲ ರೂಪರೇಖೆಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಶಿಂಧೆ ಮತ್ತು ಫಡ್ನವಿಸ್ ಶನಿವಾರ ಸಂಜೆ ಪಂಢರಪುರ ಮಾರ್ಗವಾಗಿ ಪುಣೆಗೆ ತೆರಳಿದರು, ಅಲ್ಲಿ ಮುಖ್ಯಮಂತ್ರಿಗಳು ಆಷಾಢ ಏಕಾದಶಿಯ ಸಂದರ್ಭದಲ್ಲಿ ವಿಟ್ಠಲನನ್ನು ಪೂಜಿಸಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next