Advertisement

ಮನೆಯಿಂದ ಹೊರಬರುವ ಮುನ್ನ ಮಾಸ್ಕ್ ಧರಿಸಿ: ಜನರಿಗೆ ಮಹಾರಾಷ್ಟ್ರ ಸಿಎಂ

09:10 AM Apr 09, 2020 | Nagendra Trasi |

ಮುಂಬೈ:ಮನೆಯಿಂದ ಹೊರ ಬರುವ ವೇಳೆ ಮಾಸ್ಕ್ ಧರಿಸಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ಜನರಲ್ಲಿ
ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಆರೋಗ್ಯ ಇಲಾಖೆಯ ನಿವೃತ್ತ ಸಿಬ್ಬಂದಿಗಳು, ನಿವೃತ್ತ ನರ್ಸ್ ಹಾಗೂ ವಾರ್ಡ್ ಬಾಯ್ ಗಳು
ಕೋವಿಡ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದ್ದಾರೆ.

Advertisement

ಲೈವ್ ವೆಬ್ ಕಾಸ್ಟ್ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಿರುವ ಠಾಕ್ರೆ, ಲಾಕ್ ಡೌನ್ ನಿಂದ ತೊಂದರೆ ಆಗುತ್ತಿದೆ. ಆದರೆ
ನಮಗೆ ಬೇರೆ ಯಾವುದೇ ಆಯ್ಕೆಗಳಿಲ್ಲ ಎಂದು ತಿಳಿಸಿದ್ದಾರೆ.

ಜನರು ಮನೆಯಲ್ಲಿಯೇ ಇರುವುದರಿಂದ ಹೆಚ್ಚು ಸುರಕ್ಷಿತರಾಗಿರುತ್ತೀರಿ. ಅಲ್ಲದೇ ಮನೆಯಿಂದ ಹೊರ ಬರುವ ಮೊದಲು ಮಾಸ್ಕ್
ಧರಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪರಿಸ್ಥಿತಿ ತಿಳಿಗೊಳ್ಳುವವರೆಗೆ ಮಾಸ್ಕ್ ಧರಿಸುವುದು ಅನಿವಾರ್ಯ ಎಂದು ಠಾಕ್ರೆ ತಿಳಿಸಿದ್ದಾರೆ.

ಕೆಮ್ಮ, ಶೀತ ಹಾಗೂ ಜ್ವರ ಇರುವವರಿಗೆ ಪ್ರತಿಯೊಂದು ವಾರ್ಡ್ ನಲ್ಲಿಯೂ ಪ್ರತ್ಯೇಕ ಕ್ಲಿನಿಕ್ ತೆರೆಯಲಾಗುವುದು. ಇದಕ್ಕಾಗಿ
ಕೋವಿಡ್ ಆಸ್ಪತ್ರೆಗಳನ್ನು ಕೂಡಾ ತೆರೆಯಲಾಗುವುದು ಎಂದರು.

ಕೋವಿಡ್ ಲಕ್ಷಣ ಕಂಡು ಬಂದ ರೋಗಿಗಳಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುವುದು. ಯಾರಿಗೆ ಕಡಿಮೆ ಪ್ರಮಾಣದಲ್ಲಿ ಲಕ್ಷಣ
ಕಾಣಿಸಿಕೊಂಡಿದೆ, ಯಾರಿಗೆ ತೀವ್ರ ತರವಿದೆ ಹಾಗೂ ಇತರ ರೋಗಲಕ್ಷಣ ಏನಾದರು ಇದೆಯಾ ಎಂಬ ಬಗ್ಗೆ ಪರಿಶೀಲಿಸಲಾಗುವುದು
ಎಂದು ಠಾಕ್ರೆ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next