Advertisement

ಕನ್ನಡ ಬಾವುಟಕ್ಕೆ ಚಪ್ಪಲಿಯಿಂದ ಹೊಡೆದು ಸುಟ್ಟು ಹಾಕಿದ ಕಾಂಗ್ರೆಸ್ ಕಾರ್ಯಕರ್ತರು!

09:17 AM Dec 20, 2021 | Team Udayavani |

ಬೆಳಗಾವಿ: ಕನ್ನಡ ಧ್ವಜಕ್ಕೆ ಅವಮಾನ ಮಾಡುವುದನ್ನು ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳು ಮುಂದುವರಿಸಿದ್ಸು, ಕೊಲ್ಲಾಪುರದ ಕಾಂಗ್ರೆಸ್ ಕಾರ್ಯಕರ್ತರು ಕನ್ನಡ ಬಾವುಟ ಮೇಲೆ ನಾಯಿ ಮಲಗಿಸಿ, ಚಪ್ಪಲಿಯಿಂದ ಹೊಡೆದು, ಕಪ್ಪು ಮಸಿ ಸುರಿದು ಬಾವುಟ ಸುಟ್ಟು ಕನ್ನಡಿಗರನ್ನು ಕೆಣಕಿದ್ದಾರೆ.

Advertisement

ಬೆಳಗಾವಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದರೆ, ಇತ್ತ ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಅವಮಾನ ಮಾಡುತ್ತಿರುವುದು ಮುಂದುವರಿದಿದೆ. ಕೊಲ್ಲಾಪುರ ನಗರದ ಮಿರಜಕರ ತಿಕಟಿ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧ್ವಜ ಸುಟ್ಟು ಉದ್ಧಟತನ ಮೆರೆದಿದ್ದಾರೆ.

ಇದನ್ನೂ ಓದಿ:17 ವರ್ಷ ಹಿಂದಿನ ತನ್ನದೇ ಆದೇಶಕ್ಕೆ ಉಲ್ಟಾ ಹೊಡೆದ ರೈಲ್ವೇ ಮಂಡಳಿ!

ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಮೂರ್ತಿಗೆ ಅವಮಾನ ಮಾಡಿದ್ದನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಅವಮಾನ ಮಾಡಲಾಗುತ್ತಿದೆ.

Advertisement

ಕಳೆದ ವಾರವೂ ಶಿವಸೇನೆಯವರು ಕನ್ನಡ ಬಾವುಟ ಸುಟ್ಟಿದ್ದರು. ಈಗ ಕಾಂಗ್ರೆಸ್ ಕಾರ್ಯಕರ್ತರು ಕನ್ನಡಿಗರನ್ನು ಗುರಿಯಾಗಿಸಿಕೊಂಡು ಧ್ವಜಕ್ಕೆ ಅವಮಾನ ಮಾಡಿ ಈ ಕೃತ್ಯ ಎಸಗುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next