Advertisement

ಪ್ರಧಾನಿ ಮೋದಿ ಕಟು ಟೀಕೆಗೆ ಮಳೆಯನ್ನೂ ಲೆಕ್ಕಿಸದೇ ತಪ್ಪು ಒಪ್ಪಿಕೊಂಡ ಶರದ್ ಪವಾರ್!

10:51 AM Oct 20, 2019 | Team Udayavani |

ಸತಾರಾ/ಮಹಾರಾಷ್ಟ್ರ:ಮಹಾರಾಷ್ಟ್ರದ ಸತಾರಾ ಲೋಕಸಭಾ ಕ್ಷೇತ್ರದ ಚುನಾವಣೆ ವೇಳೆ ಅಭ್ಯರ್ಥಿಯ ಆಯ್ಕೆ ವೇಳೆ ದೊಡ್ಡ ಪ್ರಮಾದವಾಗಿರುವುದನ್ನು ಎನ್ ಸಿಪಿ ವರಿಷ್ಠ ಶರದ್ ಪವಾರ್ ಶುಕ್ರವಾರ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಒಪ್ಪಿಕೊಂಡು ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Advertisement

ಎನ್ ಸಿಪಿಯ ಸಂಸ್ಥಾಪಕರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯವೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ನಡೆದ ಚುನಾವಣಾ ಪ್ರಚಾರ ವೇಳೆ ಗಂಭೀರವಾಗಿ ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಶರದ್ ಪವಾರ್ ಈ ಹೇಳಿಕೆ ನೀಡಿದ್ದಾರೆ.

ಆಗಸ್ಟ್ ನಲ್ಲಿ ಕೇಂದ್ರ ಸರಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿದ್ದನ್ನು ಮಹಾರಾಷ್ಟ್ರದ ವಿರೋಧ ಪಕ್ಷ(ಎನ್ ಸಿಪಿ, ಕಾಂಗ್ರೆಸ್)ಗಳು ಇಬ್ಬಗೆಯ ರಾಜಕೀಯ ನೀತಿಯನ್ನು ಅನುಸರಿಸಿವೆ ಎಂದು ಮೋದಿ ವಾಗ್ದಾಳಿ ನಡೆಸಿದ್ದರು.

ಇಷ್ಟೆಲ್ಲಾ ಟೀಕೆ ಮಾಡುವವರಿಗೆ(ಪವಾರ್) ಸತಾರಾ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಧೈರ್ಯ ಕೂಡಾ ಇಲ್ಲ ಎಂದು ಮೋದಿ ಸತಾರಾದಲ್ಲಿ ಚುನಾವಣಾ ಪ್ರಚಾರ ರಾಲಿಯನ್ನು ಉದ್ದೇಶಿಸಿ ಮಾತನಾಡುತ್ತ ವಾಗ್ದಾಳಿ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next