Advertisement

ಮಹಾರಾಷ್ಟ್ರ: ಕಾರ್ಖಾನೆಯಲ್ಲಿ ಬೆಂಕಿ ಅವಘಡ 8 ಮಂದಿ ಸಾವು

10:04 AM Jan 12, 2020 | sudhir |

ಮುಂಬಯಿ: ಮಹಾರಾಷ್ಟ್ರದ ಪಾಲ್ಗಾರ್‌ ಜಿಲ್ಲೆಯ ತಾರಾಪುರದಲ್ಲಿರುವ ತಾರಾ ನೈಟ್ರೇಟ್‌ ಎಂಬ ರಾಸಾಯನಿಕ ಉತ್ಪಾದನ ಘಟಕದಲ್ಲಿ ಶನಿವಾರ ರಾತ್ರಿ ಸ್ಫೋಟವೊಂದು ಸಂಭವಿಸಿದ್ದು, ಎಂಟು ಮಂದಿ ಮೃತಪಟ್ಟು, ಐವರು ಮಂದಿ ಗಾಯಗೊಂಡಿದ್ದಾರೆ.

Advertisement

ಘಟಕದಲ್ಲಿದ್ದ ರಿಯಾಕ್ಟರ್‌ ಸ್ಫೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಸುನೀಗಿದವರೆಲ್ಲರೂ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಪುರುಷ ಸಿಬಂದಿ. ಸ್ಫೋಟದ ಅನಂತರ ಘಟಕದಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದು, ಅದರಲ್ಲಿ ಇನ್ನಿತರ ಸಿಬಂದಿ ಸಿಲುಕಿದ್ದಾರೆ ಎಂದು ಅಗ್ನಿಶಾಮಕ ದಳದ ಸಿಬಂದಿ ತಿಳಿಸಿದ್ದಾರೆ.

5 ಲಕ್ಷ ರೂ. ಪರಿಹಾರ :

ಘಟನೆಯ ಬಗ್ಗೆ ಖೇದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್ ಯೋಧರನ್ನು ನಿಯೋಜಿಸಲಾಗಿದೆ. ಸ್ಫೋಟದ ಸದ್ದು 30 ಕಿ.ಮೀ. ದೂರದವರೆಗೆ ಕೇಳಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next