Advertisement

ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಸಮ್ಮತಿ

09:20 AM May 06, 2019 | Hari Prasad |

ಬೆಂಗಳೂರು : ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾಗಿರುವುದರಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಸರಕಾರ ಸಮ್ಮತಿಸಿದೆ.

Advertisement

ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ರಾಜ್ಯ ಸರಕಾರ ಮಹಾ ಸರಕಾರಕ್ಕೆ ಮನವಿ ಮಾಡಿಕೊಂಡಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಹಾರಾಷ್ಟ್ರ ಸರಕಾರ ನೀರು ಬಿಡುತ್ತಿರುವ ವಿಚಾರದ ಕುರಿತಾಗಿ ಕರ್ನಾಟಕ ಸರಕಾರದ ಮುಖ್ಯಕಾರ್ಯದರ್ಶಿಯವರಿಗೆ ಮಾಹಿತಿ ನೀಡಿದೆ.

ಈ ಬಾರಿಯ ಬೇಸಗೆ ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರವಾದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೊಯ್ನಾದಲ್ಲಿ ನಿರ್ಮಿಸಿರುವ ಆಣೆಕಟ್ಟಿನಿಂದ ಇನ್ನೆರಡು ದಿನಗಳಲ್ಲಿ ನೀರು ಬರುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next