Advertisement
ಕಳೆದ ಅಕ್ಟೋಬರ್ನಲ್ಲಿ ಪಕ್ಷಕ್ಕೆ ಉತ್ತಮ ಸ್ಥಾನಗಳು ಬಂದಿದ್ದರೂ ಕೆಲವರ ವೈಯಕ್ತಿಕ ಹಿತಾಸಕ್ತಿಗಳಿಂದಾಗಿ ಸರಕಾರ ರಚನೆ ಸಾಧ್ಯವಾಗಿರಲಿಲ್ಲ. ಮುಂಬರುವ ಚುನಾವಣೆಗಾಗಿ ಪಕ್ಷ ಸ್ವಯಂ ಶಕ್ತಿಯಿಂದ ಸ್ಪರ್ಧಿಸಲು ಈಗಿನಿಂದಲೇ ಸಿದ್ಧಗೊಳ್ಳಬೇಕು. ‘ಬಿಜೆಪಿ ವರ್ಸಸ್ ಎಲ್ಲರೂ’ ಎಂಬಂಥ ಸ್ಪರ್ಧೆಗೆ ಅಣಿಯಾಗಬೇಕು. ಅಲ್ಲದೆ ಮುಂದಿನ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಹೆಚ್ಚಿನ ಬಹುಮತ ದೊರೆತು, ಸರಕಾರ ರಚಿಸಲಿದೆ ಎಂಬ ವಿಶ್ವಾಸವನ್ನೂ ನಡ್ಡಾ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ, ಸಿಎಂ ಉದ್ಧವ್ ಠಾಕ್ರೆಗೆ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೂ ಸವಾಲೊಂದನ್ನು ಹಾಕಿದ್ದಾರೆ. ಮಹಾ ವಿಕಾಸ್ ಅಘಾಡಿಯನ್ನು ಏಕಾಂಗಿಯಾಗಿ ಸೋಲಿಸುವ ಸಾಮರ್ಥ್ಯ ಬಿಜೆಪಿಗಿದೆ. ಧೈರ್ಯವಿದ್ದರೆ, ನೀವು (ಶಿವಸೇನೆ) ಮತ್ತೂಮ್ಮೆ ಚುನಾವಣೆ ಎದುರಿಸಿ ಎಂದು ಗುಡುಗಿದ್ದಾರೆ.