Advertisement

ಆಡಳಿತ ಪಕ್ಷದ ಶಾಸಕರಿಂದಲೇ ರಾಜ್ಯಪಾಲರ ಭಾಷಣಕ್ಕೆ ಅಡ್ಡಿ

08:09 PM Mar 03, 2022 | Team Udayavani |

ಮುಂಬೈ: ರಾಜ್ಯಪಾಲರು ವಿಧಾನಸಭೆಯ ಜಂಟಿ ಅಧಿವೇಶನದ ಉದ್ದೇಶಿಸಿ ಮಾತನಾಡುವ ವೇಳೆ ಪ್ರತಿಪಕ್ಷಗಳು ಘೋಷಣೆ ಕೂಗಿ, ಅಡ್ಡಿಪಡಿಸುವುದು ಸಾಮಾನ್ಯವಾಗಿ ನಡೆಯುತ್ತದೆ. ಆದರೆ, ಮಹಾರಾಷ್ಟ್ರ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ಅದಕ್ಕೆ ತದ್ವಿರುದ್ಧವಾಗಿರುವ ಘಟನೆ ನಡೆದಿದೆ.

Advertisement

ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಶಿವಾಜಿ ಮಹಾರಾಜರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ, ಆಡಳಿತಾರೂಢ ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟದ ಶಾಸಕರೇ ಘೋಷಣೆ ಕೂಗಿದ್ದಾರೆ.

ಇದರಿಂದಾಗಿ ರಾಜ್ಯಪಾಲ ಕೋಶಿಯಾರಿ ಭಾಷಣ ಓದಲು ಸಾಧ್ಯವಾಗದೆ, ಅರ್ಧಕ್ಕೇ ನಿಲ್ಲಿಸಿ ವಾಪಸಾಗಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಮತ್ತು ಆಘಾಡಿ ಸರ್ಕಾರದ ನಡುವೆ ವಾಕ್ಸಮರ ಶುರುವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next