Advertisement

ಗಣೇಶೋತ್ಸವಕ್ಕೆ ನಿರ್ಬಂಧ: ಮಹಾರಾಷ್ಟ್ರದಲ್ಲಿರುವುದು ಹಿಂದೂ ವಿರೋಧಿ ಸರ್ಕಾರ: ಸಚಿವ ರಾಣೆ

10:40 AM Sep 11, 2021 | Team Udayavani |

ನವದೆಹಲಿ:ಗಣೇಶೋತ್ಸವ ಆಚರಣೆ ಮೇಲೆ ನಿರ್ಬಂಧ ಹೇರಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ನಾರಾಯಣ ರಾಣೆ, ಮಹರಾಷ್ಟ್ರದಾದ್ಯಂತ ಗಣೇಶೋತ್ಸವ ಆಚರಿಸಲು ನಿರ್ಬಂಧ ವಿಧಿಸಿರುವ ಶಿವಸೇನಾ ನೇತೃತ್ವದ ಮೈತ್ರಿ ಸರ್ಕಾರ ಹಿಂದೂ ವಿರೋಧಿ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Advertisement

“ಶಿವಸೇನಾ ಹಿಂದುತ್ವದ ಬಗ್ಗೆ ಮಾತನಾಡುತ್ತದೆ. ಆದರೆ ಯಾವಾಗ ಭಾರತೀಯ ಜನತಾ ಪಕ್ಷದ ಮೈತ್ರಿಯನ್ನು ಕಡಿದುಕೊಂಡಿತೋ ಅಂದೇ ಶಿವಸೇನಾದ ಹಿಂದುತ್ವ ಕೊನೆಗೊಂಡಿರುವುದಾಗಿ” ರಾಣೆ ಹೇಳಿದರು.

ಹಬ್ಬದ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ ನಿರ್ಬಂಧ ಹೇರಿರುವುದು ತಪ್ಪು. ಇದೊಂದು ಹಿಂದು ವಿರೋಧಿ ಸರ್ಕಾರ. ಹಿಂದೂಗಳ ಹಬ್ಬ ಬಂದಾಗ ಮಾತ್ರ ಇವರು (ಶಿವಸೇನಾ) ನಿರ್ಬಂಧ ಹೇರುವ ನಿರ್ಧಾರ ತೆಗೆದುಕೊಳ್ಳುತ್ತಾರೆ. ಶಿವಸೇನಾ ಹಿಂದುತ್ವ ಬರೇ ನಾಟಕೀಯ ಎಂದು ರಾಣೆ ಕಿಡಿಕಾರಿರುವುದಾಗಿ ಎಎನ್ ಐ ವರದಿ ಮಾಡಿದೆ.

ಕೋವಿಡ್ 19 ಸೋಂಕು ಪ್ರಕರಣದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಜನರು ಮನೆಯಲ್ಲಿಯೇ ಸರಳವಾಗಿ ಗಣೇಶೋತ್ಸವ ಆಚರಿಸುವಂತೆ ಮಹಾರಾಷ್ಟ್ರ ಸರ್ಕಾರ ತಿಳಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next