Advertisement

ಭೀಕರ ರಸ್ತೆ ಅಪಘಾತ: ಡೀಸೆಲ್‌ ಟ್ಯಾಂಕರ್‌-ಟ್ರಕ್‌ ಢಿಕ್ಕಿ: 9 ಮಂದಿ ಸಜೀವ ದಹನ

06:32 PM May 20, 2022 | Team Udayavani |

ಚಂದ್ರಾಪುರ: ಮಹಾರಾಷ್ಟ್ರದ ಚಂದ್ರಾಪುರ ನಗರದ ಹೊರವಲಯದಲ್ಲಿ ಡೀಸೆಲ್‌ ಟ್ಯಾಂಕರ್‌ ಮತ್ತು ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಜೀವ ದಹನಗೊಂಡಿದ್ದಾರೆ.

Advertisement

ಚಂದ್ರಾಪುರ-ಮುಲ್‌ ರಸ್ತೆಯಲ್ಲಿ ಗುರುವಾರ ರಾತ್ರಿ ಗಂಟೆ 10.30ರ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಶುಕ್ರವಾರ ಅಧಿಕೃತವಾಗಿ ತಿಳಿಸಿದ್ದಾರೆ.

ಚಂದ್ರಾಪುರ ನಗರದ ಸಮೀಪ ಅಜಯಪುರ ಸಮೀಪ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರಕ್‌ ಗೆ ಡೀಸೆಲ್‌ ತುಂಬಿದ ಟ್ಯಾಂಕರ್‌ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಟ್ಯಾಂಕರ್‌ ಢಿಕ್ಕಿ ಹೊಡೆಯುತ್ತಲೇ ಬೆಂಕಿ ಹತ್ತಿಕೊಂಡು 9 ಮಂದಿ ಸ್ಥಳದಲ್ಲಿಯೇ ಸಜೀವವಾಗಿ ದಹನಗೊಂಡರು ಎಂದು ಚಂದ್ರಾಪುರದ ಉಪ ವಿಭಾಗೀಯ ಪೊಲೀಸ್‌ ಅಧಿಕಾರಿ ಸುಧೀರ್‌ ನಂದನ್‌ವರ್‌ ತಿಳಿಸಿದರು.

ಘಟನೆ ನಡೆದ ಒಂದು ಗಂಟೆಯ ನಂತರ ಅಗ್ನಿಶಾಮಕ ವಾಹನಗಳು ಘಟನ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾದವು. ಅಗ್ನಿ ಶಾಮಕ ಸಿಬಂದಿ ತಾಸುಗಳ ಕಾಲ ಅವಿರತ ಶ್ರಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಸಫ‌ಲರಾದರು.

Advertisement

ದುರಂತದಲ್ಲಿ ಸಾವನ್ನಪ್ಪಿದವರ ಶವಗಳನ್ನು ಚಂದ್ರಾಪುರ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಸುಧೀರ್‌ ನಂದನ್‌ವರ್‌ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next