Advertisement

ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ : ಶಿರಡಿ ಸಾಯಿಬಾಬಾ ದೇವಸ್ಥಾನದ ಬಾಗಿಲು ಬಂದ್

08:47 PM Apr 05, 2021 | Team Udayavani |

ಮುಂಬೈ : ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿರುವ ಕೋವಿಡ್ -19 ಎರಡನೇ ಅಲೆ ಬಿಸಿ ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೂ ತಟ್ಟಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನೆಲೆ ದೇವಸ್ಥಾನದ ಬಾಗಿಲು ಮುಚ್ಚಲು ಆಡಳಿತ ಮಂಡಳಿ ನಿರ್ಧರಿಸಿದೆ.

Advertisement

ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಮಹಾಮಾರಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೆ ಸಾಗಿದೆ. ಕೋವಿಡ್ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಲ್ಲಿಯ ಸರ್ಕಾರ, ನೈಟ್ ಕರ್ಪ್ಯೂ, ವಾರಾಂತ್ಯದ ಲಾಕ್ ಡೌನ್ ಗಳನ್ನು ಜಾರಿಗೊಳಿಸಿದೆ. ಅದೇ ರೀತಿ ಧಾರ್ಮಿಕ ಕ್ಷೇತ್ರಗಳ ಮೇಲೆಯೂ ನಿರ್ಬಂಧ ಹೇರಿದೆ.

ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯದಲ್ಲಿರುವ ಎಲ್ಲ ಧಾರ್ಮಿಕ ಸ್ಥಳಗಳು ಬಾಗಿಲು ಮುಚ್ಚಲಿವೆ. ಅದೇ ರೀತಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಿರಡಿ ಸಾಯಿಬಾಬಾ ದೇವಸ್ಥಾನ ಕೂಡ ಇಂದು ರಾತ್ರಿ 8 ಗಂಟೆಯಿಂದ, ಮುಂದಿನ ಆದೇಶದ ವರೆಗೆ ಬಾಗಿಲು ಮುಚ್ಚಲಿದೆ ಎಂದು ಶಿರಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಠಾಕ್ರೆ ತಿಳಿಸಿದ್ದಾರೆ.

ದೇವಸ್ಥಾನದ ಬಾಗಿಲು ಮುಚ್ಚಲಿದ್ದರೂ ಕೂಡ ಎಂದಿನಂತೆ ಪೂಜಾ ಕೈಂಕರ್ಯಗಳು ಜರುಗಲಿವೆ. ಆದರೆ, ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ರವೀಂದ್ರ ಠಾಕ್ರೆ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next