Advertisement

ಮಹಾರಾಷ್ಟ್ರದ ಕನ್ನಡಿಗರಿಗೆ ಪಡಿತರ ರದ್ದು ಬೆದರಿಕೆ: ಎಂ.ಬಿ. ಪಾಟೀಲ್‌

10:43 PM Dec 02, 2022 | Team Udayavani |

ವಿಜಯಪುರ: ಮೂಲ ಸೌಕರ್ಯಗಳಿಂದ ವಂಚಿತರಾದ ಮಹಾರಾಷ್ಟ್ರದ ಗಡಿನಾಡು ಕನ್ನಡಿಗರು ಕರ್ನಾಟಕಕ್ಕೆ ಸೇರುವ ಬಗ್ಗೆ ನಿರ್ಣಯ ಕೈಗೊಂಡಿದ್ದಕ್ಕೆ ಉರಿದು ಬೀಳುತ್ತಿರುವ ಮಹಾರಾಷ್ಟ್ರ ಸರಕಾರ, ಕನ್ನಡದ ಗ್ರಾಮಗಳಿಗೆ ಪಡಿತರ ಚೀಟಿ ರದ್ದು ಮಾಡುವ ಬೆದರಿಕೆ ಹಾಕುತ್ತಿದೆ. ಈ ಬಗ್ಗೆ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಂಡು ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಆಗ್ರಹಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂಲ ಸೌಕರ್ಯ ಕಲ್ಪಿಸುವಲ್ಲಿ ಗಡಿನಾಡು ಕನ್ನಡಿಗರನ್ನು ನಿರ್ಲಕ್ಷಿಸಿದ್ದಕ್ಕೆ ಮಹಾರಾಷ್ಟ್ರ ದ ವಿರುದ್ಧ ಸಹಜವಾಗಿಯೇ ತಿರುಗಿ ಬಿದ್ದಿದ್ದಾರೆ.

ಕರ್ನಾಟಕದ ನೆಲ, ಜಲ, ಭಾಷೆಯಂಥ ಆಸ್ಮಿತೆ ವಿಷಯ ಬಂದಾಗ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸಹಿತ ಎಲ್ಲ ಪಕ್ಷಗಳೂ ಕನ್ನಡದ ಪರವಾಗಿವೆ. ಪ್ರಸ್ತುತ ನಾವು ರಾಜ್ಯ ಸರಕಾರದ ಪರವಾಗಿಯೇ ನಿಲ್ಲುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next