Advertisement

ಮಹಾಸಭಾ ನಿರ್ಧಾರ ಅಂತಿಮ: ಬಿಎಸ್‌ವೈ

07:50 AM Jul 24, 2017 | Team Udayavani |

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು ಎಂಬ ಕೂಗಿಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ
ಬಿ.ಎಸ್‌.ಯಡಿಯೂರಪ್ಪ, ಈ ವಿಚಾರದಲ್ಲಿ ವೀರಶೈವ ಮಹಾಸಭಾ ಕೈಗೊಳ್ಳುವ ನಿರ್ಣಯವೇ ಅಂತಿಮ ಎಂದು ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಯಾರು ಏನೇ ಹೇಳಿದರೂ ಅಷ್ಟೆ. ವೀರಶೈವ ಹಾಗೂ ಲಿಂಗಾಯಿತ ಎರಡೂ ಒಂದೇ. ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಬಗ್ಗೆ ಅಖೀಲ ಭಾರತ ವೀರಶೈವ ಮಹಾಸಭಾ ಕೈಗೊಳ್ಳುವ ನಿರ್ಣಯವೇ ಅಂತಿಮ ಎಂದು ಹೇಳಿದರು.

ಈ ವಿಚಾರದಲ್ಲಿ ಕೆಲವರು ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದಕ್ಕೆ ಕೆಲವು ರಾಜಕೀಯ ನಾಯಕರೂ ತಮ್ಮ ಸ್ವಾರ್ಥಕ್ಕಾಗಿ ಬೆಂಬಲ ಸೂಚಿಸುತ್ತಿದ್ದಾರೆ . ಆದರೆ, ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಆಗಿರುವುದರಿಂದ ಹೆಚ್ಚಿನ ಚರ್ಚೆ ಅಗತ್ಯವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next