Advertisement

Maha Shivratri; ಕರಾವಳಿಯಾದ್ಯಂತ ಮಹಾಶಿವರಾತ್ರಿ ಸಂಭ್ರಮ

12:48 AM Mar 09, 2024 | Team Udayavani |

ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಿವನ ದೇವಸ್ಥಾನಗಳಲ್ಲಿ ಶುಕ್ರವಾರ ಮಹಾಶಿವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆ ದವು. ಬೆಳಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

Advertisement

ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಶಿವಪೂಜೆ, ರುದ್ರಾಭಿಷೇಕ, ವಿಶೇಷ ರಂಗಪೂಜೆ ನಡೆಯಿತು. ಕುದ್ರೋಳಿ ಶ್ರೀ ಗೋಕ ರ್ಣನಾಥ ಕ್ಷೇತ್ರದಲ್ಲಿ ರಾತ್ರಿ ವೈಭವದ ರಥೋತ್ಸವ ನಡೆಯಿತು.

ಬೆಳಗ್ಗೆ ಉಮಾಮಹೇಶ್ವರ ಹೋಮ, ಮಹಾ ರುದ್ರಾಭಿಷೇಕ, ಶತ ಸೀಯಾಳಾಭಿಷೇಕ, ಮಹಾಪೂಜೆ ನಡೆಯಿತು. ಶ್ರೀ ಮಂಗಳಾದೇವಿ ಕ್ಷೇತ್ರದಲ್ಲಿ ಪ್ರಾತಃಕಾಲ ಪೂಜೆ, ಮಧ್ಯಾಹ್ನ ಶ್ರೀ ದೇವಿಯ ಮಹಾಪೂಜೆ ನಡೆಯಿತು.

ಉಡುಪಿಯಲ್ಲೂ ವಿಶೇಷ ಪೂಜೆ
ಶ್ರೀ ಅನಂತೇಶ್ವರ ಮತ್ತು ಚಂದ್ರ ಮೌಳೀಶ್ವರ ದೇವಸ್ಥಾನದಲ್ಲಿ ಆಡಳಿತದಾರರಾದ ಪುತ್ತಿಗೆ ಮಠದ ಶ್ರೀಸುಗು ಣೇಂದ್ರತೀರ್ಥ ಶ್ರೀಪಾದರು, ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next