Advertisement

ಮಹಾ ಶಿವರಾತ್ರಿ ಹಬ್ಬ ಎಲ್ಲಾರಿಗೂ ಶುಭವಾಗಲಿ ಸುಖ ಸಂತೋಷ ನೆಮ್ಮದಿ ನೀಡಲಿ : ಕೆ ಗೋಪಾಲಯ್ಯ

10:24 PM Mar 11, 2021 | Team Udayavani |

ಬೆಂಗಳೂರು : ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ  ಮಹಾಲಕ್ಷ್ಮಿ ಲೇಔಟ್ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ರವರು ಕ್ಷೇತ್ರದ ನಾಗಪುರದಲ್ಲಿರುವ ಸಲ್ಲಾಪೂರದಮ್ಮ ದೇವಸ್ಥಾನ ,ಮಂಜುನಾಥ ಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನ ನಂದಿನಿ ಬಡಾವಣೆಯ ಜೈ ಮಾರುತಿ ನಗರದಲ್ಲಿರುವ ಶಿವ ದೇವಾಲಯ ಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

Advertisement

ನಂತರ ಮಾತನಾಡಿದ ಸಚಿವರು, ರಾಜ್ಯ ಹಾಗೂ ಕ್ಷೇತ್ರದ ಒಳಿತಿಗಾಗಿ ಇಂದು ಮಹಾಶಿವರಾತ್ರಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು, ಇದರ ನಿಮಿತ್ತ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ಈ ಮಹಾ ಶಿವರಾತ್ರಿ ಹಬ್ಬ ಎಲ್ಲಾರಿಗೂ ಶುಭವಾಗಲಿ ಸುಖ ಸಂತೋಷ ನೆಮ್ಮದಿ ಕೊಟ್ಟು ಕಾಪಾಡಲಿ ಎಂದು ದೇವರಲ್ಲಿ ಪ್ರಾರ್ಥನೆ  ಸಲ್ಲಿಸಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷರಾದ ನರೇಂದ್ರ ಬಾಬು ಬಿಬಿಎಂಪಿ ಮಾಜಿ ಉಪ ಮಹಾಪೌರ ರಾದ ಶ್ರೀಮತಿ ಹೇಮಲತಾ ಗೋಪಾಲಯ್ಯ, ಎಸ್ ಹರೀಶ್, ಮುಖಂಡರಾದ ವೆಂಕಟೇಶ್ ಮೂರ್ತಿ ಚಾಲುಕ್ಯ ರಮೇಶ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next