Advertisement

ಮಹಾವೀರ ಜಯಂತಿ ಸರಳ ಆಚರಣೆ

02:44 PM Apr 07, 2020 | Suhan S |

ಹಾಸನ: ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಭಗವಾನ್‌ ಮಹಾ ವೀರರ 2619ನೇ ಜಯಂತಿಯನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು.

Advertisement

ಶಾಸಕ ಪ್ರೀತಂ ಜೆ.ಗೌಡ ಅವರು ಈ ಸಂದರ್ಭದಲ್ಲಿ ಮಾತನಾಡಿ, ಮಹನೀಯರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಹಾಗೂ ಮಹಾವೀರರ ಅಹಿಂಸಾ ತತ್ವ ಮತ್ತು ಬೋಧನೆಗಳನ್ನು ಮೈಗೂಡಿಸಿಕೊಂಡು ದೇಶದ ಒಳಿತಿಗಾಗಿ ಕೆಲಸ ಮಾಡಬೇಕು ಎಂದರು.

ಜೈನ ಸಮುದಾಯದ ಮಹವೀರ್‌ ಚಂದ್‌ ಬನ್ಸಾಲಿ ಅವರು ಮಾತನಾಡಿ, ಮಹಾವೀರರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹೇಳಿದರು. ಜೈನ ಸಮುದಾಯದ ವೀರೇಂದ್ರ ಬೇಗು, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಜೈನ ಸಮುದಾಯ ದೇಣಿಗೆ: ಕೋವಿಡ್ 19 ನಿಯಂತ್ರಣ ಕ್ರಮಗಳಿಗೆ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಜೈನ ಸಮುದಾಯವು ಒಂದು ಲಕ್ಷ ರೂ. ದೇಣಿಗೆ ನೀಡಿತು. ಜೈನ ಸಮಾಜದ ಮುಖಂಡರು ಅಪರ ಜಿಲ್ಲಾಧಿಕಾರಿಗೆ ಚೆಕ್‌ನ್ನು ಹಸ್ತಾಂತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next