Advertisement

ಮಹದಾಯಿ: ನಿಲುವಳಿ ಸೂಚನೆ ಮಂಡನೆಗೆ ನಿರ್ಧಾರ

10:44 PM Jan 04, 2020 | Team Udayavani |

ಪಣಜಿ: ಜ.7ರಂದು ಗೋವಾ ವಿಧಾನಸಭೆಯ ಒಂದು ದಿನದ ವಿಶೇಷ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಮಹದಾಯಿ ನದಿ ನೀರು ಯೋಜನೆಗೆ ಸಂಬಂಧಿಸಿ ಗೋವಾ ಫಾರ್ವರ್ಡ್‌ ಪಾರ್ಟಿ (ಜಿಎಫ್ಪಿ) ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಿದೆ.

Advertisement

ಈ ಬಗ್ಗೆ ಪಕ್ಷದ ಅಧ್ಯಕ್ಷ ವಿಜಯ ಸರ್ದೇಸಾಯಿ ಶನಿವಾರ ಮಾಹಿತಿ ನೀಡಿದ್ದಾರೆ. ಗೊತ್ತುವಳಿ ಮಂಡಿಸಲು ಆರನೇ ಒಂದರಷ್ಟು ಶಾಸಕರ ಬೆಂಬಲ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌, ಮಹಾರಾಷ್ಟ್ರ ಗೋಮಾಂತಕ ಪಾರ್ಟಿ, ಸ್ವತಂತ್ರ ಶಾಸಕರ ಬೆಂಬಲ ಪಡೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಮಹದಾಯಿ ನದಿ ನೀರಿನ ವಿಚಾರದಲ್ಲಿ ಗೋವಾ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳಲಿದೆ ಎಂದೂ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next