Advertisement

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಮೂಲಭೂತ ಸೌಕರ್ಯಗಳ ಪರಿಶೀಲನೆ

02:32 PM Jul 13, 2024 | Team Udayavani |

ರಾಯಬಾಗ: ರಾಯಬಾಗ ಪಟ್ಟಣದ ಗ್ರಾಮೀಣ ಪ್ರದೇಶದ ಪೂಜಾರಿ ತೋಟದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಮೂಲಭೂತ ವ್ಯವಸ್ಥೆ ಇಲ್ಲ ಎಂದು ವಾಹಿನಿಯಲ್ಲಿ ಪ್ರಸಾರ ಮಾಡಲಾಗಿತ್ತು ವರದಿಯನ್ನು ನೋಡಿ ಕುಡಚಿ ಮತಕ್ಷೇತ್ರದ ಶಾಸಕ ಮಹೇಂದ್ರ ತಮ್ಮಣವರು ಶಾಲೆಯ ವಾಸ್ತವ ಸ್ಥಿತಿ ಏನಿದೆ ಎಂಬುದನ್ನು ತಿಳಿದುಕೊಳ್ಳಲು ಶಾಲೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಹಾಗೂ ಎಸ್ ಡಿಎಂಸಿ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳು ,ಮುಖಂಡರುಗಳಿಗೆ ಇಲಾಖೆ ಅಧಿಕಾರಿಗಳೋಂದಿಗೆ ಚರ್ಚಿಸಿದರು.

Advertisement

ಕುಡಚಿ ಮತಕ್ಷೇತ್ರದ ಶಾಸಕರು ಬಂದು ಶಾಲೆಯ ಸಮಸ್ಯೆಯನ್ನು ಅರಿತು ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಸಚಿವರ ಜೊತೆಗೆ ಮಾತನಾಡಿ ಸಮಸ್ಯೆ ಬಗೆಹರಿಸಿ ಕೊಡುವ ಭರವಸೆ ನೀಡಿದರು‌.

ರಾಯಬಾಗ್ ವಿಧಾನಸಭಾ ಮತಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಅವರು ಇಂತಹ ಸಮಸ್ಯೆಗಳು ಕಂಡಲ್ಲಿ ಕೂಡಲೇ ಭೇಟಿ ನೀಡಿ ಸಮಸ್ಯೆಯನ್ನು ಪರಿಹರಿಸುತ್ತಿದ್ದರು ಆದರೆ ಈ ಶಾಲೆಯ ಪರಿಸ್ಥಿತಿ ಈ ಮಟ್ಟಕ್ಕೆ ಎದ್ದಿದೆ ಆದರೂ ಕೂಡ ಈ ಶಾಲೆಗೆ ಏಕೆ ಭೇಟಿ ನೀಡಿಲ್ಲ ಎನ್ನುವುದು ಕ್ಷೇತ್ರದ ಜನರ ಯಕ್ಷ ಪ್ರಶ್ನೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next