Advertisement

ಹುಮನಾಬಾದ: ಜೆಡಿಎಸ್ ಗೆ ರಾಜೀನಾಮೆ ನೀಡಿದ ಮಹೇಶ್ ಅಗಡಿ

12:57 PM Apr 16, 2023 | Team Udayavani |

ಹುಮನಾಬಾದ: ಜೆಡಿಎಸ್ ಅಭ್ಯರ್ಥಿ ಸಿಎಂ ಫೈಜ್ ಹಳೆ ಕರ‍್ಯಕರ್ತರನ್ನು ಸೂಕ್ತವಾಗಿ ಸ್ಪಂದನೆ ನೀಡದ ಕಾರಣಕ್ಕೆ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುತ್ತಿರುವುದಾಗಿ ಜೆಡಿಎಸ್ ಮಾಜಿ ತಾಲೂಕು ಅಧ್ಯಕ್ಷ ಮಹೇಶ ಅಗಡಿ ತಿಳಿಸಿದ್ದಾರೆ.

Advertisement

ಈ ಕುರಿತು  ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, 1994ರಿಂದ ಜೆಡಿಎಸ್ ಪಕ್ಷದ ನಿಷ್ಠಾವಂತ ಕರ‍್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಹುಮನಾಬಾದ ವಿಧಾನ ಸಭಾ ಕ್ಷೇತ್ರಕ್ಕೆ ಸಿಎಂ ಇಬ್ರಾಹಿಂ ಅವರು ಅಭ್ಯರ್ಥಿ ಆಗಬೇಕು ಎಂದು ಕೂಡ ಮನವರಿಕೆ ನಾನೇ ಮಾಡಿದೆ. ಸಿಎಂ ಫೈಜ್ ಅವರು ಅನೇಕ ಬಾರಿ ಮಾತನಾಡಿ ಕ್ಷೇತ್ರದ ಕುರಿತು ಮಾಹಿತಿ ಪಡೆದುಕೊಂಡಿದರು. ಆದರೆ, ಕ್ಷೇತ್ರಕ್ಕೆ ಬಂದ ನಂತರ ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಅನೇಕರು ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ನಾನು ಕೂಡ ರಾಜೀನಾಮೆ ನೀಡಿ ಇಂದು ಕಾಂಗ್ರೆಸ್ ಪಕ್ಷಕ್ಕೆ  ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next