Advertisement

ನಮ್ಮ ಹೆಣ್ಣು ಮಕ್ಕಳಿಗೆ ಸುರಕ್ಷತೆ ಯಾವಾಗ|ಅತ್ಯಾಚಾರ ಪ್ರಕರಣ ವಿರುದ್ಧ ಮಹೇಶ್ ಬಾಬು ಆಕ್ರೋಶ

04:53 PM Sep 15, 2021 | Team Udayavani |

ತೆಲಂಗಾಣ : ಹೈದರಾಬಾದ್‌ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಂತ್ರಸ್ಥೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಟಾಲಿವುಡ್ ನಟ ಮಹೇಶ್ ಬಾಬು ಅವರು ಆಗ್ರಹಿಸಿದ್ದಾರೆ.

Advertisement

ಘಟನೆ ಕುರಿತು ಟ್ವೀಟ್ ಮಾಡಿರುವ ಮಹೇಶ್ ಬಾಬು, ಸಿಂಗರೇಣಿ ಕಾಲೋನಿಯಲ್ಲಿ ಆರು ವರ್ಷದ ಮಗುವಿನ ಮೇಲೆ ನಡೆದ ಘೋರ ಅಪರಾಧವು ನಮ್ಮ ಸಮಾಜ ತಲೆ ತಗ್ಗಿಸುವಂತದ್ದು. ನಮ್ಮ ಮನೆಯ ಹೆಣ್ಣು ಮಕ್ಕಳು ಸುರಕ್ಷಿತವಾಗಿ ಇರುವುದು ಯಾವಾಗ ಎನ್ನುವ ಪ್ರಶ್ನೆ ಸದಾ ಕಾಡುತ್ತಿರುತ್ತದೆ. ಈ ಘಟನೆ ಕರುಳು ಹಿಂಡುವಂತಿದೆ. ಸಂತ್ರಸ್ಥೆಯ ಕುಟುಂಬದ ಪರಿಸ್ಥಿತಿ ಏನಾಗುತ್ತಿದೆ ಎಂಬುದನ್ನು ಊಹಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಕ್ರಮ ಕೈಗೊಂಡು ಸಂಸ್ಥ್ರೆಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ನಾನು ಅಧಿಕಾರಿಗಳನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಸೆಪ್ಟೆಂಬರ್ 9 ರಂದು ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದು ಕೊಲೆ ಮಾಡಲಾಗಿದೆ. ಆಕೆಯ ದೇಹವು ಬೀಗ ಹಾಕಿದ ಮನೆಯಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯ ನೆರೆಹೊರೆಯ 30ರ ಹರೆಯದ ಆರೋಪಿಯನ್ನು ಹುಡುಕುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.15 ತಂಡಗಳನ್ನು ರಚಿಸಿ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಕ್ಕೆ ಕಳುಹಿಸಲಾಗಿದೆ. 6 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ಹೈದರಾಬಾದ್ ಪೊಲೀಸರು ಈ ಹಿಂದೆ 10 ಲಕ್ಷ ಬಹುಮಾನವನ್ನು ಘೋಷಿಸಿದ್ದರು.

.

 

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next