Advertisement

ಮಹೇಶ ಕುಮಠಳ್ಳಿ ಅಕ್ರಮ ಬಂಧನ: ನೋಟಿಸ್‌

12:30 AM Feb 12, 2019 | Team Udayavani |

ಬೆಂಗಳೂರು: ‘ಅಥಣಿ ಶಾಸಕ ಮಹೇಶ ಕುಮಠಳ್ಳಿ ನಾಪತ್ತೆಯಾಗಿದ್ದಾರೆ, ಅವರನ್ನು ಯಾರೋ ಅಪಹರಿಸಿ ಅಕ್ರಮ ಬಂಧನದಲ್ಲಿ ಇಟ್ಟುಕೊಂಡಿದ್ದಾರೆ’ ಎಂದು ಆರೋಪಿಸಿ ಸಲ್ಲಿಸಲಾಗಿರುವ ಹೇಬಿಯಸ್‌ ಕಾರ್ಪಸ್‌ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಸಂಬಂಧ ಬೆಳಗಾವಿ ಜಿಲ್ಲೆ ಅಥಣಿಯ ನಿವಾಸಿ ವಕೀಲ ಹಾಗೂ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಪ್ರಮೋದ ದಯಾನಂದ ಹಿರೇಮನಿ ಸಲ್ಲಿಸಿರುವ ಹೇಬಿಯಸ್‌ ಕಾರ್ಪಸ್‌ ಅರ್ಜಿಯು ನ್ಯಾ. ಕೆ.ಎನ್‌. ಫ‌ಣೀಂದ್ರ ಹಾಗೂ ಕೆ. ನಟರಾಜನ್‌ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆ ಬಂದಿತ್ತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಅಥಣಿ ಪೊಲೀಸರಿಗೆ ನೋಟಿಸ್‌ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next