Advertisement

ಸ್ವಾಮೀಜಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿಗೆ ಬಸ್ ಡಿಕ್ಕಿ: ಅಪಾಯದಿಂದ ಪಾರಾದ ಶ್ರೀಗಳು

09:57 AM Dec 28, 2019 | keerthan |

ದಾವಣಗೆರೆ: ಮಹೇಶ ಶಿವಾಚಾರ್ಯ ಸ್ವಾಮೀಜಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ಹಿಂದಿನಿಂದ ಬಂದ ಕೆಎಸ್ ಆರ್ ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಘಟನೆ ಶುಕ್ರವಾರ ದಾವಣಗೆರೆ ಬಾತಿ ಕೆರೆ ಸಮೀಪ ನಡೆದಿದೆ.

Advertisement

ಬಳ್ಳಾರಿ ಜಿಲ್ಲೆ ಕೊಟ್ಟೂರು ನುಗ್ಗೆಹಳ್ಳಿ ಅಯ್ಯನಹಳ್ಳಿ ಹಿರೇಮಠದ ಪೀಠಾಧ್ಯಕ್ಷ ಮಹೇಶ ಶಿವಾಚಾರ್ಯ ಸ್ವಾಮೀಜಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸರಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ವಾಮೀಜಿಗಳಿದ್ದ ಇನ್ನೋವಾ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಗಿದೆ.

ಹಿರೇಮಠ ರಂಭಾಪುರಿ ಶಾಖಾ ಮಠವಾಗಿದ್ದು, ಬಾತಿ ತಫೋವನದಲ್ಲಿರುವ ಶ್ರೀಶೈಲ ಜಗದ್ಗುರುಗಳ ದರ್ಶನಕ್ಕೆ ಶ್ರೀಗಳು ಹೊರಟಿದ್ದರು. ಈ ವೇಳೆ  ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ದಾವಣಗೆರೆ ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next