Advertisement

ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‌ ಟೆಂಗಿನಕಾಯಿ ನೇಮಕ

11:35 PM Sep 01, 2019 | Lakshmi GovindaRaj |

ಬೆಂಗಳೂರು: ಬಿಜೆಪಿ ಧಾರವಾಡ ವಿಭಾಗದ ಸಹ ಪ್ರಭಾರಿಯಾಗಿದ್ದ ಮಹೇಶ್‌ ಟೆಂಗಿ ನಕಾಯಿ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

Advertisement

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿ.ಟಿ. ರವಿ ಅವರು ಸಚಿವರಾಗಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಮಹೇಶ್‌ ಟೆಂಗಿನಕಾಯಿ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆದೇಶಿಸಿದ್ದಾರೆ. ಏಕಕಾಲಕ್ಕೆ ಎರಡು ಪ್ರಮುಖ ಜವಾಬ್ದಾರಿ ನಿರ್ವಹಣೆಗೆ ಅವಕಾಶವಿಲ್ಲವೆಂಬ ನಿಯಮದಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಿ, ಪಕ್ಷ ಸಂಘಟನೆಯನ್ನು ತಳಮಟ್ಟದಿಂದ ಸದೃಢಗೊಳಿಸುವ ಜತೆಗೆ ಮುಂಬರುವ ಎಲ್ಲ ರೀತಿಯ ಸವಾಲು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸು ಹೆಚ್ಚಿಸುವಲ್ಲಿ ಸತತವಾಗಿ ಶ್ರಮಿಸುವಂತೆ ನಳಿನ್‌ ಕುಮಾರ್‌ ಕಟೀಲ್‌ ನೇಮಕ ಆದೇಶದಲ್ಲಿ ಆಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next