Advertisement

ಸಚಿವ ಮಹೇಶ್‌ ರಾಜೀನಾಮೆಗೂ ಬಿಜೆಪಿಗೂ ಸಂಬಂಧವಿಲ್ಲ: ಬಿಎಸ್ ವೈ

09:49 AM Oct 13, 2018 | Team Udayavani |

ಭದ್ರಾವತಿ/ಶಿವಮೊಗ್ಗ: ಸಚಿವ ಮಹೇಶ್‌ ರಾಜೀನಾಮೆ ನೀಡಿದ ವಿಚಾರಕ್ಕೂ, ಬಿಜೆಪಿಗೂ ಸಂಬಂಧವಿಲ್ಲ. ಆದರೆ, ಯಾವುದಾದರೂ ಒಂದು ಕಾರಣಕ್ಕೆ ಸರಕಾರ ಬಿದ್ದರೆ ಮುಂದೆ ನೋಡೋಣ ಎಂದು ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಎನ್‌.ಮಹೇಶ್‌ ರಾಜೀನಾಮೆ ವೈಯಕ್ತಿಕವಾದದ್ದು. ಅವರ ರಾಜೀನಾಮೆಗೆ ಮುಖ್ಯ ಕಾರಣ ಏನು ಎಂಬುದು ತಮಗೆ ತಿಳಿದಿಲ್ಲ ಎಂದರು. ಇನ್ನು ಒಂದು ತಿಂಗಳಲ್ಲಿ ಸರಕಾರ ಬೀಳುತ್ತೆ ಎಂದು ಬಿಜೆಪಿಯ ಯಾವ ಮುಖಂಡರೂ ಹೇಳಬಾರದು. ನಾವು ಪ್ರತಿಪಕ್ಷ ಸ್ಥಾನದಲ್ಲಿದ್ದೇವೆ. ವಿರೋಧ ಪಕ್ಷದ ಕೆಲಸವೇನೋ ಅದನ್ನೇ  ಮಾಡೋಣ. ಆದರೆ, ಯಾವುದಾದರೂ ಕಾರಣಕ್ಕೆ ಸರಕಾರ ಉರುಳಿದರೆ ಮುಂದೇನು ಮಾಡಬೇಕು ಎಂಬುದರ ಬಗ್ಗೆ ನೋಡಲಾಗುವುದು ಎಂದರು.

ಇದೇ ವೇಳೆ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಸಮ್ಮಿಶ್ರ ಸರ್ಕಾರ ತುಘಲಕ್‌ ದರ್ಬಾರ್‌ ನಡೆಸುತ್ತಿದೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಶಾಸಕರು ಉಸಿರುಗಟ್ಟಿದ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ವಿಧಾನಸೌಧ ಶಾಸಕರಿಲ್ಲದೆ ಭೂತ ಬಂಗಲೆಯಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next