Advertisement

Mahua case: ಜ.3ಕ್ಕೆ ವಿಚಾರಣೆ ಮುಂದೂಡಿಕೆ

08:30 PM Dec 15, 2023 | Team Udayavani |

ನವದೆಹಲಿ: “ಪ್ರಶ್ನೆಗಾಗಿ ಲಂಚ’ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಿಂದ ಉಚ್ಚಾಟನೆಗೊಳಿಸಿರುವುದನ್ನು ಪ್ರಶ್ನಿಸಿ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜ.3ಕ್ಕೆ ಮುಂದೂಡಿದೆ. ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ಎಸ್‌.ವಿ.ಎನ್‌.ಭಟ್ಟಿ ಅವರಿದ್ದ ನ್ಯಾಯಪೀಠವು, ಪ್ರಕರಣದ ಕಡತವನ್ನು ಪರಿಶೀಲನೆ ನಡೆಸಿಲ್ಲ.

Advertisement

ಹೀಗಾಗಿ ಜ.3ರಂದು ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ಮಹುವಾ ಪರ ವಕೀಲರಿಗೆ ತಿಳಿಸಿತು. ಸಂಸತ್‌ನ ನೈತಿಕ ಸಮಿತಿಯ ಶಿಫಾರಸ್ಸಿನ ಮೇರೆಗೆ ಸದಸ್ಯತ್ವ ಸ್ಥಾನದಿಂದ ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next