Advertisement

Supreme Court ಉಚ್ಚಾಟನೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಮಹುವಾ

09:16 PM Dec 11, 2023 | Shreeram Nayak |

ನವದೆಹಲಿ: “ಪ್ರಶ್ನೆಗಾಗಿ ಲಂಚ’ ಪ್ರಕರಣದಲ್ಲಿ ಲೋಕಸಭೆಯ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಇದೀಗ ಉಚ್ಚಾಟನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲು ಏರಿದ್ದಾರೆ.

Advertisement

ಲೋಕಸಭೆಯಲ್ಲಿ ಅದಾನಿ ಗ್ರೂಪ್‌ ವಿರುದ್ಧ ಪ್ರಶ್ನೆ ಕೇಳಲು ಕೆನಡಾ ಮೂಲದ ಉದ್ಯಮಿಯಿಂದ ಮಹುವಾ ಐಷಾರಾಮಿ ಉಡುಗೊರೆಗಳನ್ನು ಪಡೆದಿದ್ದರು.

ಅಲ್ಲದೇ ತಮಗೆ ನೀಡಲಾಗಿದ್ದ ಲೋಕಸಭೆ ವೆಬ್‌ಸೈಟ್‌ನ ಯೂಸರ್‌ ಐಡಿ ಹಾಗೂ ಪಾಸ್‌ವರ್ಡ್‌ ಅನ್ನು ಉದ್ಯಮಿಯೊಂದಿಗೆ ಹಂಚಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಈ ಕುರಿತು ವಿಚಾರಣೆ ನಡೆಸಿದ ಸಂಸತ್‌ನ ನೈತಿಕ ಸಮಿತಿ, ಮಹುವಾ ಉಚ್ಚಾಟನೆಗೆ ಶಿಫಾರಸು ಮಾಡಿತು. ಡಿ.8ರಂದು ಧ್ವನಿಮತದೊಂದಿಗೆ ಅದನ್ನು ಲೋಕಸಭೆ ಅಂಗೀಕರಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next