Advertisement

ಸಾಮಾಜಿಕ ಅಂತರ ಕಾಪಾಡಿ

11:53 AM Apr 26, 2020 | Suhan S |

ಪಾತಪಾಳ್ಯ: ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಪ್ರತಿ ಹಂತದಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್ 19 ವೈರಸ್‌ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಇ.ಒ. ಮಂಜುನಾಥಸ್ವಾಮಿ ಸಲಹೆ ನೀಡಿದರು.

Advertisement

ಬಿಳ್ಳೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಶುಕ್ರವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡುವುದರ ಜೊತೆಗೆ ಸುತ್ತಮುತ್ತಲಿನ ಪರಿಸರ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.

ಡಾ.ಶಿರೀಶ್‌ಕಶ್ಯಪ್‌ ಮಾತನಾಡಿ, ಲಾಕ್‌ಡೌನ್‌ ಆಗಿ ದ್ದರೂ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು. ಆಂಧ್ರದ ಗಡಿಯಲ್ಲಿರುವ ಜನರು ಬಿಳ್ಳೂ ರಿಗೆ ಬರದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು.

ನೋಡಲ್‌ ಅಧಿಕಾರಿ ಬಾಬು, ಪಿಡಿಒ ಶಂಕರರಡ್ಡಿ, ಮುಖಂಡ ರಾಮ ಚಂದ್ರ, ತಾಲೂಕು ಸಾಕ್ಷರತಾ ಸಂಯೋಜಕ ಎನ್‌.ಶಿವಪ್ಪ, ಆಶಾ, ಅಂಗನವಾಡಿ, ಆರೋಗ್ಯ ಸಹಾಯಕಿಯರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next