Advertisement

ಮೆಕ್ಕೆಜೋಳ ಹಾನಿ: 13 ಕೋಟಿ ಆರ್ಥಿಕ ನೆರವು

01:25 PM Jul 05, 2020 | Suhan S |

ಬಾಗಲಕೋಟೆ: ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆದ ರೈತರು ಲಾಕ್‌ಡೌನ್‌ ವೇಳೆ ಸಂಕಷ್ಟ ಎದುರಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆರ್ಥಿಕ ನೆರವು ಘೋಷಿಸಿದ್ದು, ಜಿಲ್ಲೆಯ ರೈತರಿಗೆ 13 ಕೋಟಿ ಅನುದಾನ ಬಂದಿದೆ.

Advertisement

2019-20ನೇ ಸಾಲಿನಲ್ಲಿ ಮುಸುಕಿನ ಜೋಳ (ಗೋವಿನ ಜೋಳ) ಬೆಳೆದ ರೈತರಿಗೆ 5 ಸಾವಿರ ರೂ.ಗಳಂತೆ ಆರ್ಥಿಕ ನೆರವನ್ನು ಜಮೆ ಮಾಡಲು ಇಲ್ಲಿಯವರೆಗೆ ಏಕ ಮಾಲೀಕತ್ವದ ಭೂ ಹಿಡುವಳಿ ಇರುವ ಒಟ್ಟು 26,099 ರೈತರಿಗೆ 13,04,95,000 ರೂ. ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ತಿಳಿಸಿದ್ದಾರೆ. ಜಂಟಿ ಖಾತೆ ಭೂ ಹಿಡುವಳಿ ಹೊಂದಿದ ರೈತರ ಪಟ್ಟಿಯನ್ನು ಜಿಲ್ಲೆಯ ಎಲ್ಲ ತಾಲೂಕುಗಳ ರೈತ ಸಂಪರ್ಕ ಕೇಂದ್ರ ಹಾಗೂ ಸಂಬಂಧಿಸಿದ ಗ್ರಾಪಂ ಕಾರ್ಯಾಲಯದಲ್ಲಿ ಪ್ರದರ್ಶಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆಯಾಗಿ 11,935 ಮೆಕ್ಕೆ ಜೋಳ ಬೆಳೆದ ಜಂಟಿ ಖಾತೆ ಭೂ ಹಿಡುವಳಿ ಹೊಂದಿದ ರೈತರಿದ್ದು, ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದು ನೋಟರಿ ದೃಢೀಕರಣ ಮಾಡಿಸಿ ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಬೇಕು.

Advertisement

Udayavani is now on Telegram. Click here to join our channel and stay updated with the latest news.

Next