Advertisement

“ಮಜ್ಜಿಗೆಪಾದೆ ತ್ಯಾಜ್ಯ ಘಟಕಕ್ಕೆ ಪರ್ಯಾಯ ವ್ಯವಸ್ಥೆ’

12:16 AM Jun 05, 2020 | Sriram |

ಮಲ್ಪೆ: ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಕಿದಿಯೂರು ಮಜ್ಜಿಗೆಪಾದೆ ಎನ್ನುವಲ್ಲಿ ನಿರ್ಮಿಸಲು ಉದ್ದೇಶಿಸಿರುವ ಘನ ತ್ಯಾಜ್ಯ ನಿರ್ವಹಣ ಘಟಕದ ಬಗ್ಗೆ ಗೊಂದಲವಿದ್ದು, ಸ್ಥಳೀಯರ ವಿರೋಧದ ಹಿನ್ನೆಲೆಯಲ್ಲಿ ಪಂಚಾಯತ್‌ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಸೇರಿದಂತೆ ಸ್ಥಳೀಯ ಸದಸ್ಯರೊಂದಿಗೆ ಶಾಸಕ ಕೆ. ರಘುಪತಿ ಭಟ್‌ ಅವರು ತ್ಯಾಜ್ಯ ಘಟಕಕ್ಕೆ ಗುರುತಿಸಿರುವ ಜಾಗಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದರು.

Advertisement

ಗ್ರಾ.ಪಂ. ಗುರುತಿಸಿರುವ ಜಾಗದಲ್ಲಿ ಘನ ತ್ಯಾಜ್ಯ ನಿರ್ವಹಣ ಘಟಕ ನಿರ್ಮಿಸದಂತೆ ಸ್ಥಳೀಯರು ಶಾಸಕರಲ್ಲಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಈಗಾಗಲೇ ಘನ ತ್ಯಾಜ್ಯ ನಿರ್ವಹಣ ಘಟಕಕ್ಕೆ ಜಾಗವನ್ನು ಮೀಸಲಿರಿಸಿ ಸರಕಾರ ದಾಖಲೆಯನ್ನು ತಯಾರಿಸಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬೇರೆ ವ್ಯವಸ್ಥೆ ಮಾಡಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.

ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಸದಸ್ಯ ರಾಜೇಂದ್ರ ಪಂದುಬೆಟ್ಟು, ಪ್ರವೀಣ್‌ ಶೆಟ್ಟಿ ಕಪ್ಪೆಟ್ಟು, ಅಂಬಲಪಾಡಿ ಗ್ರಾ.ಪಂ. ಅಧ್ಯಕ್ಷ ಪ್ರಮೋದ್‌ ಸಾಲ್ಯಾನ್‌, ಉಪಾಧ್ಯಕ್ಷೆ ಉಷಾ, ಗ್ರಾ.ಪಂ. ಸದಸ್ಯ ಸುಂದರ್‌ ಪೂಜಾರಿ, ನಾಗರಾಜ್‌, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ವಸಂತಿ ಹಾಗೂ ಊರ ಹಿರಿಯರು ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next