Advertisement

ಒಂದು ಕುಟುಂಬ, ಒಂದು ಟಿಕೆಟ್ ನಿಯಮ ಮಾಡಿದ ಶಿರೋಮಣಿ ಅಕಾಲಿದಳ

12:15 PM Sep 03, 2022 | Team Udayavani |

ಚಂಡೀಗಢ: ಪಂಜಾಬ್ ನ ಪ್ರಮುಖ ರಾಜಕೀಯ ಪಕ್ಷ ಶಿರೋಮಣಿ ಅಕಾಲಿದಳವು ‘ಒಂದು ಕುಟುಂಬ, ಒಂದು ಟಿಕೆಟ್’ ತತ್ವವನ್ನು ಅನುಸರಿಸಲು ಶನಿವಾರ ನಿರ್ಧರಿಸಿದೆ.

Advertisement

ಅಕಾಲಿದಳ ಸಂಘಟನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗುತ್ತಿದ್ದು, ಒಂದು ಕುಟುಂಬ-ಒಂದು ಟಿಕೆಟ್ ನೀತಿಯನ್ನು ತರಲಾಗುತ್ತಿದೆ; ಯುವಕರು, ಮಹಿಳೆಯರಿಗೆ ಹೆಚ್ಚು ಅವಕಾಶ ನೀಡಲಾಗುತ್ತದೆ ಎಂದು ಶಿರೋಮಣಿ ಅಕಾಲಿದಳದ ಅಧ್ಯಕ್ಷ ಎಸ್.ಎಸ್.ಬಾದಲ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಜಿಲ್ಲಾ ಅಧ್ಯಕ್ಷರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶೇ.50ರಷ್ಟು ಸ್ಥಾನಗಳನ್ನು 50 ವರ್ಷದೊಳಗಿನ ಪಕ್ಷದ ಕಾರ್ಯಕರ್ತರಿಗೆ ಮೀಸಲಿಡಲಾಗುವುದು ಎಂದು ಬಾದಲ್ ಹೇಳಿದ್ದಾರೆ.

ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡಿರುವ ಅಕಾಲಿದಳ ಈ ಬರಿ ವಿಧಾನಸಭಾ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ ಕೇವಲ 3 ರಲ್ಲಿ ಮಾತ್ರ ಗೆಲುವು ಸಾಧಿಸಿ ಹೀನಾಯ ಸೋಲು ಅನುಭವಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next