Advertisement

ರೈತ ಸಂಘದ ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ನಿರ್ಧಾರ

03:08 PM Dec 27, 2022 | Team Udayavani |

ಬೆಳಗಾವಿ: ಕಿತ್ತೂರು ಕರ್ನಾಟಕ ಭಾಗದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ಕಾರವಾರ ಜಿಲ್ಲೆಗಳ ವ್ಯಾಪ್ತಿಯ ರೈತ ಸಂಘದ ಪ್ರಮುಖ ಮುಖಂಡರು ಹಾಗೂ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ

Advertisement

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸಂಜೆ ಕಾರ್ಯಕ್ರಮ ನಡೆಯಲಿದೆ. ಇದೇ ಸಮಯದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿಯವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರು ಹಾಗೂ  ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸೇರಿ ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ ಹಾಗೂ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ಮಾಜಿ ಸಚಿವ ಡಿ.ಬಿ.ಇನಾಮದಾರ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ

ಸೇರ್ಪಡೆಯಾಗುವವರು: ಶಿವಾನಂದ ಹೊಳೆಹಡಗಲಿ, ಬೈಲಪ್ಪ ದಳವಾಯಿ, ಸಿದ್ದಣ್ಣ ಕಂಬಾರ, ಬಿಷ್ಟಪ್ಪ ಶಿಂಧೆ, ಮಡಿವಾಳಪ್ಪ ವರಗಣ್ಣವರ, ಕಲ್ಲಪ್ಪ ಕುಗಟಿ, ಕಲಗೌಡ ಪಾಟೀಲ, ಮಹಾಂತೇಶ ರಾಹುತ, ನಿಂಗಪ್ಪ ನಂದಿ, ನೀಲಕಂಠ ನೀರೋಳ್ಳಿ, ನಾಗಯ್ಯ ಪೂಜಾರ, ಭೀಮಣ್ಣ ಕಾಸಾಯಿ, ಸೇರಿದಂತೆ ಸಾವಿರಾರು ರೈತ ಸಂಘದ ಕಾರ್ಯಕರ್ತರು ಸೇರ್ಪಡೆಯಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next