Advertisement

W.Bengal: ನುಡಿದಂತೆ ನಡೆದ ದೀದಿ; ರಾಜ್ಯ ಆರೋಗ್ಯ, ಪೊಲೀಸ್‌ ಇಲಾಖೆಗೆ ಭಾರೀ ಸರ್ಜರಿ

08:58 PM Sep 17, 2024 | Team Udayavani |

ಕೋಲ್ಕತಾ: ಟ್ರೈನಿ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಷ್ಕರ ನಡೆಸುತ್ತಿದ್ದ ವೈದ್ಯರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಆರೋಗ್ಯ ಹಾಗೂ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಿದ್ದಾರೆ.

Advertisement

ಕೋಲ್ಕತ್ತಾ ಪೊಲೀಸ್‌ ಮುಖ್ಯಸ್ಥರು ಹಾಗೂ ಆರೋಗ್ಯ ಇಲಾಖೆಯ ಕೆಲವು ಅಧಿಕಾರಿಗಳನ್ನು ತೆಗೆದು ಹಾಕಿದ ಬೆನ್ನಲ್ಲೇ, ನೂತನ ಪೊಲೀಸ್‌ ಆಯುಕ್ತರಾಗಿ ಐಪಿಎಸ್‌ ಅಧಿಕಾರಿ ಮನೋಜ್‌ ಕುಮಾರ್‌ ವರ್ಮಾರನ್ನು ನೇಮಿಸಲಾಗಿದೆ. ಜತೆಗೆ ವರ್ಗಾವಣೆ ಆಗಿರುವ ಆರೋಗ್ಯ ಸೇವೆಗಳ ನಿರ್ದೇಶಕ, ವೈದ್ಯ ಶಿಕ್ಷಣ ಇಲಾಖೆಯ ನಿರ್ದೇಶಕ ಹುದ್ದೆಗಳಿಗೂ ಹೊಸಬರನ್ನು ನೇಮಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವೈದ್ಯರು, “ಸರ್ಕಾರದ ಆದೇಶದ ಪ್ರತಿ ನೋಡಿದ್ದೇವೆ. ಮುಂದಿನ ಕ್ರಮದ ಬಗ್ಗೆ ಚರ್ಚಿಸಿ ತೀರ್ಮಾನಿಸುತ್ತೇವೆ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next