Advertisement

ಮಕರ ಸಂಕ್ರಾತಿ ರಥೋತ್ಸವ

11:00 AM Jan 15, 2019 | |

ತೀರ್ಥಹಳ್ಳಿ: ಮಕರ ಸಂಕ್ರಾತಿಯ ಅಂಗವಾಗಿ ಪಟ್ಟಣದ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ರಥೋತ್ಸವ ಹಮ್ಮಿಕೊಳ್ಳಲಾಗಿತ್ತು.

Advertisement

ರಥಬೀದಿಯ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನಂತರ ದೇವರ ಮೂರ್ತಿಯನ್ನು ರಥದಲ್ಲಿರಿಸಿ ಸಾವಿರಾರು ಭಕ್ತಾದಿಗಳು ರಥ ಎಳೆಯುವುದರ ಮುಖಾಂತರ ರಥೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳು, ದೇವಾಲಯದ ಸಮಿತಿಯವರು ಹಾಗೂ ಅನ್ನದಾಸೋಹ ಸಮಿತಿಯರು ಇದ್ದರು. ಶ್ರೀ ಮಾರಿಕಾಂಬಾ ದೇವಾಲಯ: ಮಕರ ಸಂಕ್ರಾತಿಯ ಅಂಗವಾಗಿ ಶ್ರೀ ಮಾರಿಕಾಂಬಾ ದೇವಾಲಯದಲ್ಲಿ ದುರ್ಗಾಹೋಮ ಹಮ್ಮಿಕೊಳ್ಳಲಾಗಿತ್ತು. ಸಂಕ್ರಾತಿಯ ಪ್ರಯುಕ್ತ ಶ್ರೀ ಮಾರಿಕಾಂಬಾ ಮೂರ್ತಿಯನ್ನು ಅಲಂಕರಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next