Advertisement

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

11:33 PM Sep 13, 2024 | Team Udayavani |

ರಾಮನಗರ: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಎಲ್ಲಿಗೆ ಹೋದರೂ ಬೆಂಕಿ ಹಚ್ಚುವುದೇ ಅವರ ಕೆಲಸ. ಅವರ ಧೋರಣೆ ಏನಿದೆ ಎಂಬುದನ್ನು ಅವರ ಮಾತುಗಳೇ ತಿಳಿಸುತ್ತಿವೆ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಲೇವಡಿ ಮಾಡಿದರು.

Advertisement

ನಾಗಮಂಗಲ ಗಲಭೆ ಕಾಂಗ್ರೆಸ್‌ ಪ್ರಾಯೋಜಿತ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ಘಟನೆಗೆ ಸಂಬಂಧಿಸಿ ಕುಮಾರಸ್ವಾಮಿ ಅವರನ್ನೇ ತನಿಖಾಧಿಕಾರಿಯಾಗಿ ನೇಮಕ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ.
ಅವರ ತನಿಖೆಯಿಂದಲೇ ಎಲ್ಲವೂ ಬಯಲಾಗಲಿ ಎಂದು ವ್ಯಂಗ್ಯವಾಡಿದರು.

ಸಿಎಂ ಸಿದ್ದರಾಮಯ್ಯ ಅವರೇ ನಮಗೆ ಅನಭಿಷಿಕ್ತ ದೊರೆ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next