Advertisement

ಶೀಘ್ರ ವೈಟ್‌ಟ್ಯಾಪಿಂಗ್‌ ಪೂರ್ಣ ಮಾಡಿ

12:32 PM Dec 23, 2017 | Team Udayavani |

ಬೆಂಗಳೂರು: ಹೆಚ್ಚುವರಿ ಯಂತ್ರಗಳನ್ನು ಬಳಸಿ ವೈಟ್‌ಟಾಪಿಂಗ್‌ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮೇಯರ್‌ ಆರ್‌.ಸಂಪತ್‌ ರಾಜ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ಶುಕ್ರವಾರ ಮಹದೇವಪುರ ವಲಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಬೈರತಿ ಬಸವರಾಜ್‌ ಅವರೊಂದಿಗೆ ಪರಿಶೀಲಿಸಿದ ಅವರು, ನಗರದ ಪ್ರಮುಖ ರಸ್ತೆಗಳನ್ನು ವೈಟ್‌ಟಾಪಿಂಗ್‌ಗೊಳಿಸಲು ಯೋಜನೆ ರೂಪಿಸಲಾಗಿದ್ದು, ಮೊದಲ ಹಂತದಲ್ಲಿ ನಾಗವಾರ ಹೊರ ವರ್ತುಲ ರಸ್ತೆಯ 11.5 ಕಿ.ಮೀ. ರಸ್ತೆಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಈಗಾಗಲೇ 2.7 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದರು.

ನಾಗವಾರ ಹೊರವರ್ತುಲ ರಸ್ತೆಯಲ್ಲಿ ತೀವ್ರ ಸಂಚಾರ ದಟ್ಟಣೆಯಿರುವುದರಿಂದ ಹೆಚ್ಚುವರಿ ಯಂತ್ರಗಳನ್ನು ಬಳಸುವ ಮೂಲಕ ಕಾಮಗಾರಿ ಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸದ್ಯ ಕಾಂಕ್ರಿಟ್‌ ಹಾಕುವ ಎರಡು ಫೆವರ್‌ ಯಂತ್ರಗಳನ್ನು ಮಾತ್ರ ಬಳಸಲಾಗುತ್ತಿದ್ದು, 4 ಯಂತ್ರಗಳನ್ನು ಬಳಸಿ ಕೆಲಸ ಬೇಗ ಮುಗಿಸುವಂತೆ ತಿಳಿಸಲಾಗಿದೆ ಎಂದರು. 

ಕಪ್ಪುಪಟ್ಟಿಆರೋಪ ನಗರದ ಪ್ರಮುಖ ರಸ್ತೆಗಳನ್ನು ವೈಟ್‌ಟಾಪಿಂಗ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಬಿಬಿಎಂಪಿ, ಮಧುಕಾನ್‌ ಮತ್ತು ನಾಗಾರ್ಜುನ ಎಂಬ ಕಂಪನಿಗಳಿಗೆ ಟೆಂಡರ್‌ ನೀಡಿದೆ. ಅದರಲ್ಲಿ 400 ಕೋಟಿ ರೂ. ಮೊತ್ತ ಕಾಮಗಾರಿಯ ಟೆಂಡರ್‌ ಪಡೆದಿರುವ ಮಧುಕಾನ್‌ ಕಂಪನಿ ವಿಶ್ವಬ್ಯಾಂಕ್‌ 2 ವರ್ಷ ಕಪ್ಪುಪಟ್ಟಿಗೆ ಸೇರಿಸಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಪಾಲಿಕೆ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ, ಕಪ್ಪುಪಟ್ಟಿಗೆ ಸೇರಿಸಿರುವ ಕಂಪನಿಯ ಟೆಂಡರ್‌ರನ್ನು ಕೂಡಲೇ ರದ್ದುಪಡಿಸಬೇಕು ಎಂದು ಪಾಲಿಕೆಯನ್ನು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next