Advertisement

ಬೆಳೆ ಸಮೀಕ್ಷೆ ಸದ್ಬಳಕೆ ಮಾಡಿಕೊಳ್ಳಿ: ಉದಾಸಿ

03:00 PM Aug 17, 2020 | Suhan S |

ಹಾನಗಲ್ಲ: ಪ್ರಸಕ್ತ ಮುಂಗಾರು ಬೆಳೆ ಸಮೀಕ್ಷೆಯನ್ನು ರೈತರೇ ಮೊಬೈಲ್‌ ಆ್ಯಪ್‌ ಮೂಲಕ ಕೈಗೊಳ್ಳುವ ಕಾರ್ಯವನ್ನು ಆಗಸ್ಟ್‌ 24ರ ವರೆಗೆ ವಿಸ್ತರಿಸಲಾಗಿದೆ. ಇದುವರೆಗೆ ಸಮೀಕ್ಷೆ ಮಾಡದ ತಾಲೂಕಿನ ಹಿಡುವಳಿದಾರರು ಕೂಡಲೇ ತಮ್ಮ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಶಾಸಕ ಸಿ.ಎಂ. ಉದಾಸಿ ಕರೆ ನೀಡಿದರು.

Advertisement

ಪಟ್ಟಣದ ಶ್ರೀ ಕುಮಾರೇಶ್ವರ ಮಠದ ಆವರಣದಲ್ಲಿ ಕೃಷಿ ಸಮೀಕ್ಷೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಮೀಕ್ಷೆ ಎಸ್‌ಡಿಆರ್‌ಎಫ್‌, ಎಸ್‌ಡಿಆರ್‌ಪಿ ಅಡಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮೆ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖೀಕ ಇಲಾಖೆ, ಕೃಷಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ ಮತ್ತು ವ್ಯವಸಾಯ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಸಹಕಾರಿಯಾಗಲಿದೆ ಎಂದರು.

ಕೂಡಲೆ ನಿಗದಿತ ಸಮಯದಲ್ಲಿ ರೈತರು ಮೊಬೈಲ್‌ ಆ್ಯಪ್‌ ಮೂಲಕ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಖುದ್ದಾಗಿ ವರದಿ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ, ಗುರುಸಿದ್ದಪ್ಪ ಕೊಂಡೋಜಿ, ಕೃಷಿ ಅಧಿಕಾರಿಗಳಾದ ದೇವೆಂದ್ರಪ್ಪ ಕಡ್ಲೆರ, ಸಂಗಮೇಶ ಹಕ್ಲಪ್ಪನವರ ಮೊದಲಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next