Advertisement
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪರಿಹಾರ ಕೇಂದ್ರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕ್ ಅದಾಲತ್ಗಾಗಿ ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಹಾಗೂ ಕೊಳ್ಳೇಗಾಲ ನ್ಯಾಯಾಲಯದಲ್ಲಿ ಒಟ್ಟು ಎಂಟು ಸಭೆಗಳಿಗೆ ಸಂಧಾನಕಾರರನ್ನು ನೇಮಿಸಲಾಗಿದೆ. ಸಂಧಾನಕಾರರು ಎರಡು ಪಕ್ಷಗಾರರ ಭಿನ್ನಾಭಿಪ್ರಾಯ, ಸಮಸ್ಯೆಗಳನ್ನು ಆಲಿಸಿ, ಉಭಯ ಪಕ್ಷಗಾರರಿಗೂ ಒಪ್ಪಿಗೆಯಾಗುವ ರೀತಿಯಲ್ಲಿ ರಾಜೀ ಕಾರ್ಯ ನಡೆಸಲಿದ್ದಾರೆ.
Related Articles
Advertisement
ಸಂಧಾನಕಾರರು ತಮ್ಮ ಮುಂದೆ ಬಂದ ಪ್ರಕರಣಗಳನ್ನು ಉಭಯ ಪಕ್ಷಗಾರರ ಭಿನ್ನಾಭಿಪ್ರಾಯ ಆಲಿಸಿ, ಕಾನೂನಿನ ಚೌಕಟ್ಟಿನಲ್ಲಿ ಬಗೆಹರಿಸುವ ರಾಜಿ ಸೂತ್ರಗಳನ್ನು ತಿಳಿಸುತ್ತಾರೆ. ಪಕ್ಷಗಾರರು ರಾಜಿ ಸೂತ್ರಕ್ಕೆ ಒಪ್ಪದಿದ್ದಲ್ಲಿ, ಸಂಧಾನ ಆಗುವುದರಿಂದ ಉಂಟಾಗುವ ಅನುಕೂಲತೆಗಳ ಬಗ್ಗೆ ಸಂಧಾನಕಾರರು ತಿಳಿಸಿಕೊಡುತ್ತಾರೆ ಎಂದು ತಿಳಿಸಿದರು.
ಮೇಲ್ಮನವಿ ಸಲ್ಲಿಕೆಗೆ ಅವಕಾಶವಿಲ್ಲ: ಲೋಕ್ ಅದಾಲತ್ನಲ್ಲಿ ಸಂಧಾನವಾದ ಪ್ರಕರಣಗಳ ವಿರುದ್ಧ ಯಾವುದೇ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ಪಕ್ಷಗಾರರು ಸಂಧಾಯ ಮಾಡಿದ ಶೇ.75ರಷ್ಟು ನ್ಯಾಯಾಲಯ ಶುಲ್ಕವನ್ನು ಮರುಪಾವತಿ ಮಾಡಲಾಗುತ್ತದೆ.
ಮುಂದಿನ ವ್ಯಾಜ್ಯಗಳಿಗೆ ಆಸ್ಪದ ಕೊಡದೇ ಸಹಕಾರ, ಸಹಬಾಳ್ವೆಗೆ ಅವಕಾಶ ಮಾಡಿಕೊಡುವ ಲೋಕ್ ಅದಾಲತ್ ಅನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಹಾಜರಿದ್ದರು.