Advertisement

ಮುಕ್ವೆ : ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

03:39 PM Apr 04, 2019 | pallavi |

ಮುಕ್ವೆ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಅವರ ಪರವಾಗಿ ಮುಂಡೂರಿನಲ್ಲಿ ಮತ ಯಾಚಿಸಲಾಯಿತು. ಬಿಜೆಪಿ ಮುಂದಾಳು ಅರುಣ್‌ ಕುಮಾರ್‌ ಪುತ್ತಿಲ ಮಾತನಾಡಿ, ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳೇ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲಿದೆ.

Advertisement

ಈ ಬಾರಿ ದ.ಕ. ಜಿಲ್ಲೆಯಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು 2 ಲಕ್ಷಗಳಿಗೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು. ಮುಂಡೂರು ಗ್ರಾ.ಪಂ. ಸದಸ್ಯರಾದ ಬಾಲಕೃಷ್ಣ ಪೂಜಾರಿ, ಅಶೋಕ್‌ ಕುಮಾರ್‌ ಪುತ್ತಿಲ, ವಾರ್ಡ್‌ ಅಧ್ಯಕ್ಷ ಶ್ರೀಧರ ನಾಯ್ಕ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next