Advertisement

ಸ್ವಚ್ಛತೆ ಕಾಪಾಡಿದರೆ ಮಲೇರಿಯಾ ನಿಯಂತ್ರಣ

01:44 PM Jun 30, 2019 | Team Udayavani |

ತುಮಕೂರು: ವೈಯಕ್ತಿಕ ಸ್ವಚ್ಛತೆ, ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಕಾಪಾಡುವುದರಿಂದ ಮಲೇರಿಯಾ ನಿಯಂತ್ರಣಕ್ಕೆ ತರಲು ಸಾಧ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಟಿ.ಎನ್‌.ಪುರುಷೋತ್ತಮ್‌ ತಿಳಿಸಿದರು.

Advertisement

ನಗರದ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿ ಕಾರಿಗಳ ಕಚೇರಿ ಸಹಯೋಗದಲ್ಲಿ ಏರ್ಪಡಿಸಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯ ಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಸ್ವಚ್ಛತೆ ಅರಿವು ಮೂಡಿಸಿ:ಸೊಳ್ಳೆಗಳಿಂದ ಹರಡುವ ಮಲೇರಿಯಾ ಮಾರಕ ರೋಗವಾಗಿ ಮಾರ್ಪಟ್ಟಿದೆ. ಸಾರ್ವಜನಿಕ ಸ್ಥಳ, ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕೆಂದರಲ್ಲದೆ, ಹತ್ತು ದಿನಗಳ ಕಾಲ ಒಂದೇ ಕಡೆ ನೀರು ನಿಂತಿದ್ದರೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ನಿಟ್ಟಿನಲ್ಲಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸಬೇಕು. ವಿದ್ಯಾರ್ಥಿಗಳು ಸಂದೇಶ ವಾಹಕಗಳಂತೆ ಕಾರ್ಯನಿರ್ವಹಿಸುವುದ ರಿಂದ ಶಿಕ್ಷಕರು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ ಗಳಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸಬೇಕು. ಇದ ರಿಂದ ಜನರಿಗೆ ಬಹು ಬೇಗ ಮಾಹಿತಿ ರವಾನೆಯಾಗು ತ್ತದೆ ಎಂದು ಸಲಹೆ ನೀಡಿದರು.

103 ಪ್ರಕರಣಗಳು: ಜಿಲ್ಲೆಯಲ್ಲಿ ಕಳೆದ ವರ್ಷ 103 ಮಲೇರಿಯಾ ಪ್ರಕರಣಗಳು ಬೆಳಕಿಗೆ ಬಂದಿದ್ದು 2019ರ ಜನವರಿಯಿಂದ ಈವರೆಗೆ 16 ಪ್ರಕರಣಗಳು ಪತ್ತೆಯಾಗಿವೆ. ಲ್ಯಾಟಿನ್‌ ಅಮೇರಿಕಾ, ಆಫ್ರಿಕಾ, ಮಧ್ಯ ಪ್ರಾಚ್ಯ ಹಾಗೂ ಪೂರ್ವ ಏಷ್ಯಾ ಪ್ರದೇಶಗಳಲ್ಲಿ ಮಲೇರಿಯಾ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತವೆ. ಮಲೇರಿಯಾ ಹರಡುವಿಕೆ ಹಾಗೂ ತಡೆ ಗಟ್ಟುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಮಹಾನಗರ ಪಾಲಿಕೆ ಸದಸ್ಯ ಧರಣೇಂದ್ರ ಕುಮಾರ್‌ ಮಾತನಾಡಿ, ಪ್ಲಾಸ್ಟಿಕ್‌ ಬಳಕೆಯಿಂದಲೂ ಮಲೇರಿಯಾ ಹರಡುವ ಸಾಧ್ಯತೆಯಿದೆ. ಪ್ಲಾಸ್ಟಿಕ್‌ ಬಳಕೆ ನಿಯಂತ್ರಿಸುವುದರಿಂದ ಮಲೇರಿಯಾ ಮುಕ್ತ ಮಾಡಬಹುದಾಗಿದೆ. ಪ್ರತಿಯೊಬ್ಬರೂ ಮನೆ ಮುಂದೆ ಗಿಡ ನೆಡಿ ಹಾಗೂ ಅಕ್ಕ ಪಕ್ಕದ ಮನೆಯವರಿಗೂ ಗಿಡ ನೆಡಲು ತಿಳಿಸಿ. ಇದರಿಂದ ಸ್ವಚ್ಛ ಪರಿಸರ ನಿರ್ಮಾಣ ವಾಗಿ ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಿಸ ಬಹದಾಗಿದೆ ಎಂದು ಕರೆ ನೀಡಿದರು.

Advertisement

ಖಾಲಿ ನಿವೇಶನಗಳಲ್ಲಿ ಕಸ ಹಾಕಬೇಡಿ: ಮಹಾನಗರ ಪಾಲಿಕೆ ಸದಸ್ಯ ಮಂಜುನಾಥ್‌ ಮಾತನಾಡಿ, ಸಾರ್ವ ಜನಿಕರು ಖಾಲಿ ನಿವೇಶನಗಳಲ್ಲಿ ಕಸ ಹಾಕುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುತ್ತದೆ. ಪ್ರತಿನಿತ್ಯ ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಪಾಲಿಕೆಯ ಕಸ ಸಂಗ್ರ ಹಿಸುವ ವಾಹನಕ್ಕೆ ನೀಡುವುದರಿಂದ ಪರಿಸರ ವನ್ನು ಸ್ವಚ್ಛವಾಗಿಟ್ಟುಕೊಳ್ಳಬಹುದೆಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾ ನಿಕೇತನ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಡಾ.ಸಿ. ಜಯರಾಮ್‌ ಮಾತನಾಡಿ, ತುಮಕೂರು ನಗರವು ಸ್ಮಾರ್ಟ್‌ಸಿಟಿಯತ್ತ ಸಾಗುತ್ತಿದೆ. ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ಸಾರ್ವಜನಿಕರು ಜವಾಬ್ದಾರಿ ಅರಿಯಬೇಕು ಎಂದರು. ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಹನುಮಂತ ರಾಯಪ್ಪ, ಶಾಲೆಯ ಮುಖ್ಯೋಪಾಧ್ಯಾಯ ಎ.ಎಸ್‌.ಲಕ್ಷ್ಮೀನಾರಾಯಣ, ಸಹಾಯಕ ಕೀಟ ಶಾಸ್ತ್ರಜ್ಞೆ ಎ.ಉಷಾ, ತಾಲೂಕು ಆರೋಗ್ಯಾಧಿಕಾರಿ

ಎಸ್‌.ಶರತ್‌ಚಂದ್ರ, ಆರೋಗ್ಯ ಹಿರಿಯ ಅಧಿಕಾರಿ ವೆಂಕಟಾಚಲಯ್ಯ, ವೈದ್ಯಾಧಿಕಾರಿ ಶಾಹಿರಬಾನು, ಆರೋಗ್ಯಾಧಿಕಾರಿ ಪಾಪ್ಪಣ್ಣ, ಆರೋಗ್ಯ ಇಲಾಖೆಯ ಸಿಬ್ಬಂದಿ, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next