Advertisement

ಮಳವಳ್ಳಿ ಕೇಸ್ :ಸಂಸದೆ ಸುಮಲತಾ ವಿರುದ್ಧ ನಿಖಿಲ್ ಅಸಮಾಧಾನ

06:42 PM Oct 19, 2022 | Team Udayavani |

ಮೈಸೂರು :ಮಳವಳ್ಳಿಯಲ್ಲಿ ನಡೆದ ಅಪ್ರಾಪ್ತ ವಯಸ್ಕ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯ ಕುಟುಂಬವನ್ನು ಸಂಸದೆ ಸುಮಲತಾ ಸಂತ್ರಸ್ಥ ವಿಳಂಬವಾಗಿ ಭೇಟಿ ಮಾಡಿರುವುದಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ,ಕ್ಷೇತ್ರದ ಸಂಸದರು ಘಟನೆ ನಡೆದ ದಿನವೇ ಸಂತ್ರಸ್ಥೆಯ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಬೇಕಿತ್ತು.ಆದರೆ ನಾಲ್ಕು ದಿನಗಳ ಬಳಿಕ ಬೇರೆ ಯಾವುದೋ ಕಾರ್ಯಕ್ರಮಕ್ಕೆ ಹೋದಾಗ ಮಳವಳ್ಳಿಗೆ ಭೇಟಿ ನೀಡಿದ್ದಾರೆ.ಇದಕ್ಕೂ ಮೊದಲೇ ಕ್ಷೇತ್ರದ ಜೆಡಿಎಸ್ ಶಾಸಕ ಅನ್ನದಾನಿ ಹಾಗು ನಾನು ಸಂತ್ರಸ್ಥೆಯ ಮನೆಗೆ ಭೇಟಿ ನೀಡಿ ಆತ್ಮಸ್ತೈರ್ಯ ತುಂಬುವ ಕೆಲಸ ಮಾಡಿದ್ದೇವೆ. ಬಾಲಕಿಯ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲೂ ಶಾಸಕ ಅನ್ನದಾನಿ ಶ್ರಮಿಸಿದ್ದಾರೆ ಎಂದು ನಿಖಿಲ್ ಹೇಳಿದರು.

ಯುವಕರಿಗೆ 30% ಟಿಕೆಟ್
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಯುವಕರಿಗೆ 30% ಟಿಕೆಟ್ ಕೊಡಬೇಕೆಂದು ಮನವಿ ಮಾಡಿದ್ದೇನೆ. ಅದೇ ರೀತಿ ಯುವಕರು ಹೆಚ್ಚಿನ ಪ್ರಮಾಣದಲ್ಲಿ ರಾಜಕೀಯಕ್ಕೆ ಬರಬೇಕು. ಯುವಕರು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಗೆಲ್ಲುವ ಅರ್ಹತೆ ಇರುವ ಯುವ ನಾಯಕರು ಟಿಕೆಟ್ ಕೇಳಬೇಕು. ಈ ನಿಟ್ಟಿನಲ್ಲಿ ನಾವು ಕೂಡ ಸರ್ವೇ ಮಾಡಿಸುತ್ತಿದ್ದೇವೆ. ಗೆಲ್ಲುವ ಸಾಮರ್ಥ್ಯ ಇರುವ ಯುವ ನಾಯಕರಿಗೆ ಟಿಕೆಟ್ ಕೊಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next