Advertisement

ಮಲೆನಾಡು ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಎಚ್ಚರಿಕೆ ಸಂದೇಶ

11:40 PM Jul 29, 2022 | Team Udayavani |

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್‌ ನೆಟ್ಟಾರ್‌ ಹತ್ಯೆ ಬಳಿಕ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ಹೆಚ್ಚುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ.

Advertisement

ನಾವು ಮತ ನೀಡಿದ್ದೇವೆ. ಆದರೆ ಬಿಜೆಪಿ ನಾಯಕರ ಗುಲಾಮರಲ್ಲ, ನಾವು ಹಿಂದೂ ಕಾರ್ಯ ಕರ್ತರು. ನಿಮ್ಮ ಬೆನ್ನು ತಟ್ಟೋದು ಗೊತ್ತು, ಬಾರಿಸೋದು ಗೊತ್ತು. ನಿಮ್ಮನ್ನು ಗೆಲ್ಲಿಸೋದು ಗೊತ್ತು, ಸೋಲಿ ಸೋದು ಗೊತ್ತು ಎಂದು ರಾಜ್ಯ ಸರಕಾರಕ್ಕೆ ಮತ್ತು ಬಿಜೆಪಿಗೆ ಮಲೆನಾಡು ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಸ್ಟೇಟಸ್‌ ಹಾಕಿ ಕಾರ್ಯಕರ್ತರು ಎಚ್ಚರಿಕೆ ಸಂದೇಶ ವನ್ನು ರವಾನಿಸುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕಟ್ಟೆಚ್ಚರ
ಶಿವಮೊಗ್ಗದ ರೌಡಿಶೀಟರ್‌ ಹಂದಿ ಅಣ್ಣಿ ಕೊಲೆ, ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಹತ್ಯೆ
ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸ್‌ ಇಲಾಖೆ ಕಟ್ಟೆಚ್ಚರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಹೊರ ಜಿಲ್ಲೆಗಳಿಂದ ಬರುವ ವಾಹನಗಳ ಮೇಲೆ ನಿಗಾ ವಹಿಸುವಂತೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ. ಎಚ್‌. ಅಕ್ಷಯ್‌ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next