Advertisement

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

12:14 AM Apr 30, 2024 | Team Udayavani |

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಶಾಸಕ ಎಚ್‌.ಡಿ.ರೇವಣ್ಣ ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ದಾಖಲು ಮಾಡಿರುವುದರ ಹಿಂದೆ ದುರುದ್ದೇಶ ಅಡಗಿದೆ ಎಂದು ದೂರುದಾರರ ಕುಟುಂಬದ ಮಹಿಳೆ ಗೌರಮ್ಮ ಆರೋಪಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌರಮ್ಮ ಹಾಗೂ ಇತರರು, ಭವಾನಿ ರೇವಣ್ಣ ನಮಗೆ ಎಲ್ಲ ರೀತಿಯ ಸಹಾಯ ಮಾಡಿದ್ದಾರೆ. ದೂರ ನೀಡಿರುವಾಕೆ ಸಾಲ ಮಾಡಿಕೊಂಡಿದ್ದಾಗ, ಭವಾನಿ ಅವರೇ ಅವರಿಗೆ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ರೇವಣ್ಣ ಕುಟುಂಬ ನಮ್ಮ ಮೇಲೆ ಯಾವುದೇ ದೌರ್ಜನ್ಯ ಮಾಡಿಲ್ಲ. ಚುನಾವಣೆ ವೇಳೆ ರೇವಣ್ಣ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡಿದ್ದಾರೆ. ದೂರಿನಲ್ಲಿ ಯಾವುದೇ ಸತ್ಯಾಂಶ ಇರುವುದಿಲ್ಲ ಎಂದರು.

ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ. ಯಾವುದೋ ಒತ್ತಡಕ್ಕೆ ಸಿಲುಕಿ ಈ ರೀತಿ ಮಾತನಾಡುತ್ತಿದ್ದಾರೆ. 5 ವರ್ಷಗಳ ಹಿಂದೆಯೇ ಪ್ರಶ್ನೆ ಮಾಡ ಬೇಕಿತ್ತು. ಅಲ್ಲಿಂದ ಇಲ್ಲಿಯವರೆಗೂ ಯಾವುದೇ ವಿಚಾರ ಪ್ರಸ್ತಾವಿಸಿಲ್ಲ. ಈಗ ಯಾವುದೋ ದುರುದ್ದೇಶದ ಒತ್ತಡದಿಂದ ಹೀಗೆ ಮಾಡಿದ್ದಾರೆ. ಸರಿಯಾದ ರೀತಿ ತನಿಖೆ ಆಗಬೇಕೆಂದು ಮನವಿ ಮಾಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next