Advertisement

ಮಲ್ಲಾರು ರಿಕ್ಷಾದ ಮೇಲೆ ಮರ ಬಿದ್ದ ಘಟನೆ: ಇಬ್ಬರ ಅಂತ್ಯಕ್ರಿಯೆ

12:05 AM May 13, 2023 | Team Udayavani |

ಕಾಪು: ಕಾಪು ಮಲ್ಲಾರು ಸ್ವಾಗತ್‌ ನಗರದ ಬಳಿ ಚಲಿಸುತ್ತಿದ್ದ ರಿಕ್ಷಾದ ಮೇಲೆ ಗುರುವಾರ ರಾತ್ರಿ ಬೃಹತ್‌ ಮರ ಬಿದ್ದು, ಮೃತಪಟ್ಟಿದ್ದ ಪ್ರಯಾಣಿಕರಾದ ಪಾದೂರು ಕೂರಾಲು ನಿವಾಸಿ ಪುಷ್ಪಾ ಕುಲಾಲ್‌ ಮತ್ತು ಕಳತೂರು ನಿವಾಸಿ ಕೃಷ್ಣ ಮುಖಾರಿ ಅವರ ಮೃತದೇಹಗಳನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಯಿಂದ ಮನೆಗೆ ತಂದು ಅಂತಿಮ ಸಂಸ್ಕಾರದ ವಿಧಿವಿಧಾನಗಳನ್ನು ನಡೆಸಲಾಯಿತು.

Advertisement

ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಗುರ್ಮೆ ಫೌಂಡೇಶನ್‌ ಅಧ್ಯಕ್ಷ ಗುರ್ಮೆ ಸುರೇಶ್‌ ಶೆಟ್ಟಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಮೃತರ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.

ಈ ಘಟನೆಗೆ ಅರಣ್ಯ ಇಲಾಖೆ ಮತ್ತು ಸ್ಥಳೀಯಾಡಳಿತದ ನಿರ್ಲಕ್ಷ್ಯವೇ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಘಟನೆಯನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಸರಕಾರಿ ಜಾಗದಲ್ಲಿರುವ ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆಯ ಮೂಲಕ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಎಂದು ಉಡುಪಿ ಆರ್‌ಎಫ್‌ಒ ಸುಬ್ರಹ್ಮಣ್ಯ ಆಚಾರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next