Advertisement

Kaup ಮಲ್ಲಾರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

11:59 PM Aug 05, 2024 | Team Udayavani |

ಕಾಪು: ಮಲ್ಲಾರು ರಾಣ್ಯಕೇರಿ ನಿವಾಸಿ ಪ್ರಕಾಶ್‌ (47) ಅವರು ನಿರ್ಮಾಣ ಹಂತದ ತನ್ನ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಕೂಲಿ ಕೆಲಸ ಮಾಡುತ್ತಿದ್ದು, ವಿಪರೀತ ಕುಡಿತದ ಚಟ ಹೊಂದಿದ್ದ ಅವರು ನಿರ್ಮಾಣ ಹಂತದ ಮನೆಯಲ್ಲಿ ಒಬ್ಬರೇ ವಾಸದ್ದರು. ಪತ್ನಿ ಗೀತಾ ದೂರಿನಂತೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉದ್ಯಾವರ: ಅವಿವಾಹಿತ ನೇಣಿಗೆ ಶರಣು
ಕಾಪು: ಉದ್ಯಾವರ ಸಂಪಿಗೆನಗರದ ನಿವಾಸಿ ಹರೀಶ್‌ ಶೆಣೈ (52) ಸೋಮವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವಿವಾ ಹಿತರಾಗಿದ್ದ ಅವರು ಉಡುಪಿಯ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ರಾತ್ರಿ 1.30ರ ವೇಳೆಗೆ ಅಂಬಲಪಾಡಿಯಲ್ಲಿರುವ ಸಹೋದರನಿಗೆ ಕರೆ ಮಾಡಿದ್ದು, ಮರಳಿ ಕರೆ ಮಾಡಿದಾಗ ಕರೆ ಸ್ವೀಕರಿಸಿರಲಿಲ್ಲ.

ಸೋಮವಾರ ಬೆಳಗ್ಗೆ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂತು. ಸಹೋದರ ಗಣೇಶ್‌ ಶೆಣೈ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next