Advertisement

ಕೆಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹೊರಕೇರಿ ಅವಿರೋಧ ಆಯ್ಕೆ

04:47 PM Jun 18, 2021 | Team Udayavani |

ಧಾರವಾಡ: ಪ್ರತಿಷ್ಠಿತ ಕೆಸಿಸಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಮುಖಂಡ ಮಲ್ಲಿಕಾರ್ಜುನ ಹೊರಕೇರಿ ಅವಿರೋಧವಾಗಿ ಆಯ್ಕೆಯಾದರು.

Advertisement

ಇಂದು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಹೊರಕೇರಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಏಕೈಕ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾ ಅಧಿಕಾರಿ ಎಂ.ಬಿ.ಪೂಜಾರ ಅವರು ಹೊರಕೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ಬ್ಯಾಂಕ್ ನ ಅಧ್ಯಕ್ಷ ಸ್ಥಾನಕ್ಕೆ ಬಾಪುಗೌಡ ಪಾಟೀಲ ರಾಜೀನಾಮೆ ನೀಡಿದ್ದರಿಂದ ಹೊಸ ಅಯ್ಕೆ ಪ್ರಕ್ರಿಯೆ ಜರುಗಿತು. ಬದಲಾದ ರಾಜಕೀಯ ಬೆಳವಣಿಯಲ್ಲಿ ಮಲ್ಲಿಕಾರ್ಜುನ ಹೊರಕೇರಿ ಅವರು ಅಧ್ಯಕ್ಷ ಗಾದಿಗೇರುವುದು ನಿಶ್ಚಿತವಾಗಿತ್ತು.

ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಹೊರಕೇರಿ ಅವರನ್ನು ಉಪಾಧ್ಯಕ್ಷ ಎಸ್.ವೈ.ಪಾಟೀಲ, ನಿರ್ದೇಶಕರಾದ ಗಂಗಾಧರ ಸಾತಣ್ಣವರ, ಶಿವಕುಮಾರಗೌಡ ಪಾಟೀಲ, ಮಂಜುನಾಥ ಮುರಳ್ಳಿ, ಜಿ.ಪಿ.ಪಾಟೀಲ ಇನ್ನಿತರರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಮುನಿಯಪ್ಪ, ಪ್ರಧಾನ ವ್ಯವಸ್ಥಾಪಕ ಶಿವಾನಂದ ಹೂಗಾರ, ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next