Advertisement

ಸಿದ್ದರಾಮೋತ್ಸವ; ಮೌನಕ್ಕೆ ಮೊರೆಹೋದ ಮಲ್ಲಿಕಾರ್ಜುನ ಖರ್ಗೆ

11:07 PM Jul 31, 2022 | Team Udayavani |

ಬೆಂಗಳೂರು: ಸಿದ್ದರಾಮೋತ್ಸವದ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Advertisement

ದಾವಣಗೆರೆಯಲ್ಲಿ ಆ. 3ರಂದು ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಒಂದೆಡೆ ಭರ್ಜರಿ ಸಿದ್ಧತೆ ನಡೆಯು ತ್ತಿದ್ದು, ಸ್ವತಃ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಕೂಡ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಈ ಮಧ್ಯೆ ಪಕ್ಷದ ವಲಯದಲ್ಲೇ ವಿವಿಧ ನಾಯಕರ ಬಣಗಳ ನಡುವೆ ಈ ಉತ್ಸವದ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಇದೆಲ್ಲದರ ಮಧ್ಯೆ ಮಲ್ಲಿಕಾರ್ಜುನ ಖರ್ಗೆ ಈ ವಿಚಾರದ ಬಗ್ಗೆಯೇ ಮಾತನಾಡದಿರಲು ನಿರ್ಧರಿಸಿದ್ದಾರೆ.

ನಗರದಲ್ಲಿ ರವಿವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ನಡೆಯುತ್ತಿರುವ ಉತ್ಸವದ ವಿಚಾರಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next