Advertisement

Mallikarjun Kharge: ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸ ಹೇಳಿಕೆ ಸುಳ್ಳು: ಖರ್ಗೆ ಆಕ್ರೋಶ

10:10 PM May 22, 2024 | Team Udayavani |

ನವದೆಹಲಿ: ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ರಾಮ ಮಂದಿರವನ್ನು ಬುಲ್ಡೋಜರ್‌ ಮೂಲಕ ಕೆಡವಿ ಹಾಕಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರಸ್ಕರಿಸಿದ್ದಾರೆ.

Advertisement

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ನಮ್ಮ ಪಕ್ಷ ಎಲ್ಲಾ ಧರ್ಮಗಳನ್ನು ಗೌರವದಿಂದ ಕಾಣುತ್ತದೆ. ನಮ್ಮ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ರಾಮ ಮಂದಿರವನ್ನು ಬುಲ್ಡೋಜರ್‌ ಮೂಲಕ ಕೆಡವಿ ಹಾಕಲಿದೆ ಎಂಬ ಪ್ರಧಾನಿ ಹೇಳಿಕೆ ಸಂಪೂರ್ಣ ಸುಳ್ಳು. ಕಾಂಗ್ರೆಸ್‌ ನೇತೃತ್ವದ ಸರ್ಕಾರ 55 ವರ್ಷಗಳ ಕಾಲ ಅಧಿಕಾರದಲ್ಲಿತ್ತು. ಯಾರ ಮಂಗಳಸೂತ್ರವನ್ನೂ ಕಸಿದುಕೊಂಡಿಲ್ಲ, ಯಾರನ್ನೂ ಪೂಜೆ ಮಾಡಬೇಡಿ ಎಂದು ತಡೆ ಹೇರಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ರಾಮ ಮಂದಿರ ಧ್ವಂಸಗೊಳಿಸುತ್ತಾರೆ ಎಂಬ ಹೇಳಿಕೆ ಸಂಪೂರ್ಣ ಸುಳ್ಳು. ಬಿಜೆಪಿ ನಾಯಕರು ಅದೇ ರೀತಿ ಮಾತನಾಡುತ್ತಾರೆ. ಬಡವರಿಗೆ ನೆರವು ನೀಡುವುದು ಮತ್ತು ಗೌರವಿಸುವುದು ತುಷ್ಟೀಕರಣವೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಮತ್ತು ಮೋದಿಯವರು ಅಧಿಕಾರಕ್ಕೆ ಬರುವುದಕ್ಕಿಂತ ಮೊದಲು ಜನರು ಸಂತೋಷದಿಂದ ಜೀವಿಸುತ್ತಿದ್ದರು ಎಂದು ಖರ್ಗೆ ಸಂದರ್ಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನನ್ನ ಖಾಸಗಿ ಫೋಟೋ ಬಿಡುಗಡೆಮಾಡಲು ಆಪ್‌ನಲ್ಲಿ ಸಂಚು ನಡೆಯುತ್ತಿದೆ: ಸ್ವಾತಿ ಮಲಿವಾಲ್‌

Advertisement

Udayavani is now on Telegram. Click here to join our channel and stay updated with the latest news.

Next