Advertisement

ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ

06:00 AM Mar 12, 2018 | |

ಕಲಬುರಗಿ: ವಿಧಾನಸಭೆ ಚುನಾವಣೆ ಕಾವೇರುತ್ತಿರುವ ಬೆನ್ನಲ್ಲೇ ಮತ್ತೂಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದೆ. ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅನಾಮಧೇಯ ವ್ಯಕ್ತಿಗಳಿಂದ ಜೀವ ಬೆದರಿಕೆ ಕರೆ ಬರುತ್ತಿದೆ ಎಂಬುದನ್ನು ಸ್ವತಃ ಖರ್ಗೆಯವರೆ ಬಹಿರಂಗಪಡಿಸಿದ್ದಾರೆ.

Advertisement

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ದುಷ್ಕರ್ಮಿಗಳು, ಅನಾಮಧೇಯ ವ್ಯಕ್ತಿಗಳು ಜೀವ ಬೆದರಿಕೆ ಹಾಕುತ್ತಿದ್ದಾರೆ. ಕರೆ ಮಾಡಿ ಬೆದರಿಸುವುದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಇಲ್ಲ ಸಲ್ಲದ್ದನ್ನು ಬಿಂಬಿಸಿ ಬೆದರಿಸುವ ಕೆಲಸ ನಿರಂತರವಾಗಿ ನಡೆದಿದೆ. ಈ ಸಂಬಂಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ದೆಹಲಿಯ ತುಘಲಕ್‌ ನಗರ ಪೊಲೀಸ್‌ ಠಾಣೆಯಲ್ಲಿ ತಮ್ಮ ಆಪ್ತ ಸಹಾಯಕ ಎರಡು ತಿಂಗಳ ಹಿಂದೆಯೇ ದೂರು ದಾಖಲಿಸಿದ್ದಾರೆ. ಅಲ್ಲದೆ, ನಾನೇ ಖುದ್ದಾಗಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಹಾಗೂ ಸ್ಪೀಕರ್‌ ಅವರಿಗೆ ಲಿಖೀತವಾಗಿ ದೂರು ನೀಡಿ¨ªೇನೆ ಎಂದರು.

ನೀಡಿರುವ ದೂರು ತನಿಖಾ ಹಂತದಲ್ಲಿರುವುದರಿಂದ ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ. ಯಾರ ಹೆಸರನ್ನು ಹೇಳಲು ಬಯಸುವುದಿಲ್ಲ. ತನಿಖೆ ನಂತರವೇ ಎಲ್ಲವೂ ಗೊತ್ತಾಗಲಿದೆ. ನಾನು ಹೇಳಿದರೆ ಅದು ರಾಜಕೀಯ ಎನ್ನಬಹುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next